ಇಂಗ್ಲಿಷ್ ಮಂಜ ಸಿನಿಮಾದ ಸಾರಥಿ ಆರ್ಯ ಎನ್.ಮಹೇಶ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ‘ಬಂಬೂ ಸವಾರಿ’ ಸಿನಿಮಾದ ಮುಹೂರ್ತ ಇವತ್ತು ಬೆಂಗಳೂರಿನ ಗುಂಡಾಂಜನೇಯ ದೇಗುಲದಲ್ಲಿ ನೆರವೇರಿತು. ಈ ಸಮಾರಂಭದಲ್ಲಿ ಕನ್ನಡದ ಚಿತ್ರರಂಗದ ಪ್ರತಿಭಾನ್ವಿತ ನಿರ್ದೇಶಕ ಸಿಂಪಲ್ ಸುನಿ, ನಟ ಶ್ರೀನಗರ ಕಿಟ್ಟಿ, ವಿನೋದ್ ಪ್ರಭಾಕರ್ ಹಾಗೂ ನಿರ್ದೇಶಕ ಕೆ.ಎಂ.ಚೈತನ್ಯ ಉಪಸ್ಥಿತರಿದ್ದರು. ಇದನ್ನು ಓದಿ: ‘ಅಣ್ಣಾವ್ರ ನಾಡು’: ಡಾ.ರಾಜ್ ಕುಮಾರ್ ನೆನೆದ ರಾಕಿಂಗ್ ಸ್ಟಾರ್ ಯಶ್ಸಿಂಪಲ್ ಸುನಿ, ಹೆಸರಲ್ಲಿಯೇ ಪಾಸಿಟಿವ್ ಇದೆ. ಸವಾರಿ ಅನ್ನುವ ಸಿನಿಮಾ ಮೈಲುಗಲ್ಲು ಸಾಧಿಸಿತ್ತು. ಮಹೇಶ್ ಪ್ರಚಲಿತ ವಿದ್ಯಮಾನಗಳ ಮೇಲೆ ಸಿನಿಮಾ ಕಥೆ ಹೇಳ್ತಾರೆ. ವರ್ಧನ್ ಒಳ್ಳೆ ಕಲಾವಿದ. ಹೊಸತಂಡದಲ್ಲಿ ಇರುವವರಿಗೆ ಎಲ್ಲರಿಗೂ ಶುಭ ಹಾರೈಕೆಗಳು. ಸವಾರಿ ನೂರು ದಿನ ಓಡಲಿ ಎಂದು ಹಾರೈಸಿದರು. ಶ್ರೀನಗರ ಕಿಟ್ಟಿ, ಮಹೇಶ್ ಮುಂದಿನ ಪ್ರಯತ್ನ. ನಾನು ಜಂಬೂ ಸವಾರಿ ಅಂತಾ ಅಂದುಕೊಂಡಿದ್ದೆ. ಟೈಟಲ್ ಹೇಳಿದ ಮೇಲೆ ಬಂಬೂ ಸವಾರಿ ಅಂತಾ ಗೊತ್ತಾಯ್ತು. ತಂತ್ರಜ್ಞನರು, ಕಲಾವಿದರು ಎಲ್ಲರಿಗೂ ಒಳ್ಳೆದಾಲಿ ಎಂದು ಶುಭ ಕೋರಿದರು. ಇದನ್ನೂ ಓದಿ : ಸೂಪರ್‌ಸ್ಟಾರ್ ಮಹೇಶ್ ಬಾಬು ಜೊತೆ ಕಾಣಿಸಿಕೊಂಡ ಮೇಘಾ ಶೆಟ್ಟಿವಿನೋದ್ ಪ್ರಭಾಕರ್, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಆಶೀರ್ವಾದದೊಂದಿಗೆ ಸಿನಿಮಾ ಪ್ರಾರಂಭ ಮಾಡಿದ್ದಾರೆ. ನಾನು ಕೂಡ ಕಿಟ್ಟಪ್ಪನ ತರಹ ಜಂಬೂ ಸವಾರಿ ಅಂದುಕೊಂಡಿದ್ದೆ. ನವಗ್ರಹ ಮಾಡುವಾಗ ಜಂಬೂ ಸವಾರಿ ಫೇಮಸ್ ಆಗಿತ್ತು. ಇಡೀ ತಂಡಕ್ಕೆ ಒಳ್ಳೆದಾಗಲಿ ಎಂದು ಬೆಸ್ಟ್ ವಿಷಸ್ ತಿಳಿಸಿದರು. ಇದನ್ನೂ ಓದಿ : ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ರಾಕಿಂಗ್ ಸ್ಟಾರ್ ಯಶ್ ಭೇಟಿಬಂಬೂ ಸವಾರಿ ಸಿನಿಮಾದಲ್ಲಿ ತಾಂಡವ ರಾಮ, ವರ್ಧನ್, ದೀಪಕ್ ವಿ ಮುಖ್ಯಭೂಮಿಕೆಯಲ್ಲಿ ನಟಿಸ್ತಿದ್ದು, ಆದ್ಯ ಪ್ರಿಯಾ, ಅಭಿ ಸಾರಿಕಾ ನಾಯಕಿಯಾರಾಗಿ ಬಣ್ಣ ಹಚ್ಚಿದ್ದು, ಉಳಿದಂತೆ  ಕವಿರತ್ನ ಡಾ ವಿ ನಾಗೇಂದ್ರ ಪ್ರಸಾದ್, ನಾಗೇಂದ್ರ ಅರಸ್, ಬಾಲರಾಜ್ ವಾಡಿ, ಷರೀಫ್  ಕಲಾ ಬಳಗದಲ್ಲಿದೆ. ಬಂಬೂ ಸವಾರಿ ಕಲ್ಟ್ ಜಾನರ್ ಸಿನಿಮಾವಾಗಿದ್ದು, ಬೆಂಗಳೂರು ಸುತ್ತಮುತ್ತ ಶೂಟಿಂಗ್ ಮಾಡಲು ಚಿತ್ರತಂಡ ಪ್ಲ್ಯಾನ್ ಹಾಕಿಕೊಂಡಿದೆ.Sign in to your account
Username or Email Address


Password

 Remember Me


