ಕೋಲಾರ: ಶ್ರೀರಾಮ ನವಮಿ ಅಂಗವಾಗಿ ಅದ್ಧೂರಿಯಾಗಿ ಶೋಭಾಯಾತ್ರೆ ಆಯೋಜನೆ ಮಾಡಲಾಗಿತ್ತು. ಶೋಭಾಯಾತ್ರೆ ಕಾರ್ಯಕ್ರಮದ ಮೊದಲ ದಿನವಾಗಿ ಶ್ರೀರಾಮನ ಶೋಭಾಯಾತ್ರೆ ನಡೆಯುತ್ತಿತ್ತು. ಅದ್ಧೂರಿಯಾಗಿ ನಡೆಯುತ್ತಿದ್ದ ಶೋಭಾಯಾತ್ರೆ ಮೇಲೆ ದುಷ್ಕರ್ಮಿಗಳು ಕಲ್ಲು ತೂರಿದ ಪರಿಣಾಮ ಕೋಲಾರ ಜಿಲ್ಲೆ ಮುಳಬಾಗಿಲು ಪಟ್ಟಣದಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದೆ.ಹೌದು. ಇಂದು ಲವಕುಶ ಜನ್ಮಭೂಮಿ ಪುಣ್ಯಕ್ಷೇತ್ರ ಟ್ರಸ್ಟ್ ವತಿಯಿಂದ ಶ್ರೀರಾಮನವಮಿ ಪ್ರಯುಕ್ತ ಅದ್ಧೂರಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಅದರ ಮೊದಲ ದಿನದ ಅಂಗವಾಗಿ ಶ್ರೀರಾಮನ ಶೋಭಾಯಾತ್ರೆ ಮುಳಬಾಗಿಲು ಪಟ್ಟಣದಲ್ಲಿ ನಡೆಯುತ್ತಿತ್ತು. 3 ಗಂಟೆ ಸುಮಾರಿಗೆ ಆರಂಭವಾದ ಶೋಭಾಯಾತ್ರೆ ಮುಳಬಾಗಿಲು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸುತಿತ್ತು. ಶೋಭಾಯಾತ್ರೆ ಸಂಜೆ 7.30ರ ಸುಮಾರಿಗೆ ಮುಳಬಾಗಿಲು ಪಟ್ಟಣದ ಜಹಂಗೀರ್ ಸರ್ಕಲ್ ಬಳಿ ಬರುತ್ತಿದ್ದಂತೆ ವಿದ್ಯುತ್ ಸಂಪರ್ಕ ಕಡಿತವಾಗಿದೆ.ರಸ್ತೆಯಲ್ಲಿ ಕತ್ತಲು ಆವರಿಸುತ್ತಿದ್ದ ಕೆಲವೇ ಕ್ಷಣಗಳಲ್ಲಿ ಶೋಭಾಯಾತ್ರೆ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ತಣ್ಣಗಿದ್ದ ವಾತಾವರಣ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿ ಶೋಭಾಯಾತ್ರೆಯಲ್ಲಿದ್ದವರು ಚೆಲ್ಲಾಪಿಲ್ಲಿಯಾಗಿ ಓಡಲು ಆರಂಭಿಸಿದ್ದಾರೆ. ಕೆಲವರು ಕಲ್ಲು ತೂರಾರಟ ನಡೆಸಿದವರ ಮೇಲೆ ಪ್ರತಿಯಾಗಿ ಕಲ್ಲುತೂರಲು ಆರಂಭಿಸಿ ಈವೇಳೆ ಪರಿಸ್ಥಿತಿಯಲ್ಲಿ ನಿಯಂತ್ರಿಸಿಲು ಪೊಲೀಸರ ಲಾಠಿ ಚಾರ್ಜ್ ಮಾಡಿದ್ದಾರೆ. ಇದನ್ನೂ ಓದಿ: ತಾಯಿ ಆಗಬೇಕು ಎಂದಿದ್ದಕ್ಕೆ ಆಕೆ ಗಂಡನಿಗೆ 15 ದಿನ ಪೆರೋಲ್ ನೀಡಿದ ಹೈಕೋರ್ಟ್ಶೋಭಾಯಾತ್ರೆ ಸಾಗುತ್ತಿದ್ದ ರಸ್ತೆಯಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗಿದ್ದೇ ಮತ್ತೆ ವಿದ್ಯುತ್ ಬರುವಷ್ಟರಲ್ಲಿ ಶಾಂತವಾಗಿದ್ದ ಶೋಭಾಯಾತ್ರೆಯಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿ ಹೋಗಿತ್ತು. ರಸ್ತೆ ಬಳಿ ಇದ್ದ ಜನರೆಲ್ಲಾ ಅಂಗಡಿಗಳನ್ನು ಬಂದ್ ಮಾಡಿ, ಕೆಲವು ಕಿಡಿಗೇಡಿಗಳು ರಸ್ತೆ ಬಳಿ ಇದ್ದ ಬೈಕ್‍ವೊಂದಕ್ಕೆ ಬೆಂಕಿ ಹಚ್ಚಿದ್ದಾರೆ. ರಸ್ತೆ ಬದಿ ಇದ್ದ ಕೆಲವು ಕಾರ್‍ಗಳ ಮೇಲೆ ಪೊಲೀಸರ ವಾಹನಗಳ ಮೇಲೂ ಕಲ್ಲು ತೂರಾಟ ಮಾಡಿದ್ದಾರೆ. ಕ್ಷಣದಲ್ಲಿ ಎರಡು ಕೋಮಿನ ಜನರ ನಡುವೆ ಸಂಘರ್ಷಕ್ಕೆ ದಾರಿ ಮಾಡುವ ಸಾಧ್ಯತೆ ಇದ್ದ ಹಿನ್ನೆಲೆ ಪರಿಸ್ಥಿತಿಯನ್ನು ನಿಯಂತ್ರಿಸಿದ ಪೊಲೀಸರು ಜನರನ್ನು ಚದುರಿಸಿದ್ದಾರೆ.ಶೋಭಾಯಾತ್ರೆ ಹಿನ್ನೆಲೆ ಈಗಾಗಲೇ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಿದ್ದ ಪರಿಣಾಮ ಪರಿಸ್ಥಿತಿಯನ್ನು ತಹಬದಿಗೆ ತರಲಾಯಿತು. ಸ್ಥಳಕ್ಕೆ ಬಂದ ಹಿರಿಯ ಪೊಲೀಸ್ ಅಧಿಕಾರಿಗಳು ಪರಿಸ್ಥಿತಿಯನ್ನು ನಿಯಂತ್ರಣ ಮಾಡಿ ಶೋಭಾಯಾತ್ರೆಯನ್ನು ಮುಂದುವರೆಯಲು ಅನುವು ಮಾಡಿಕೊಟ್ಟಿದ್ದಾರೆ. ಮುಳಬಾಗಿಲು ತಾಲೂಕು ಆವನಿ ಗ್ರಾಮಕ್ಕೆ ತಲುಪಬೇಗಿದ್ದ ಶೋಭಾಯಾತ್ರೆ ತಲುಪಿದೆ. ಇದನ್ನೂ ಓದಿ: ಬೆಂಗಳೂರಿನ 15 ಪ್ರತಿಷ್ಠಿತ ಶಾಲೆಗಳಲ್ಲಿ ಹುಸಿ ಬಾಂಬ್ ಬೆದರಿಕೆ – ಅಮೆರಿಕ ಐಪಿ ಅಡ್ರೆಸ್ ಶಂಕೆಸದ್ಯ ಮುಳಬಾಗಿಲು ಪಟ್ಟಣದಲ್ಲಿ ಬೂದಿಮುಚ್ಚಿದ ಕೆಂಡದಂತಿದ್ದು, ಸ್ಥಳಕ್ಕೆ ಎಸ್ಪಿ ದೇವರಾಜ್, ಕೇಂದ್ರ ವಲಯದ ಐಜಿಪಿ ಚಂದ್ರಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಎರಡು ದಿನಗಳ ಕಾಲ ಮುಳಬಾಗಿಲು ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಜೊತೆಗೆ ಘಟನೆ ಸಂಬಂಧ ನಾಲ್ಕೈದು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.ಒಟ್ಟಿನಲ್ಲಿ ಶ್ರೀರಾಮ ನವಮಿ ಅಂಗವಾಗಿ ಅದ್ಧೂರಿಯಾಗಿ ನಡೆಯಬೇಕಿದ್ದ ಶೋಭಾಯಾತ್ರೆ ಸಂಘರ್ಷದ ಯಾತ್ರೆಯಾಗಿ ಪರಿಣಮಿಸಿದೆ. ಸದ್ಯ ಮುಳಬಾಗಿಲು ಪಟ್ಟಣದಲ್ಲಿ ಹಾಗೂ ಕೋಲಾರ ಜಿಲ್ಲೆಯಲ್ಲಿ ವಾತಾವರಣ ಬೂದಿ ಮುಚ್ಚಿದ ಕೆಂಡದಂತಿದ್ದು, ಇಲ್ಲಿ ಶುರುವಾದ ಸಂಘರ್ಷ ಎಲ್ಲಿಗೆ ಹೋಗಿ ನಿಲ್ಲುತ್ತೆ ಅನ್ನೋದೆ ಸದ್ಯದ ಕುತೂಹಲ.Sign in to your account
Username or Email Address


Password

 Remember Me


