ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸ್ಪಷ್ಟಪಡಿಸಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಪಕ್ಷದ ಕಾರ್ಯಕರ್ತ. ಪಕ್ಷ ನೀಡಿದ ಜವಾಬ್ದಾರಿ ನಿರ್ವಹಿಸಲು ನಾನು ಬದ್ಧ. ಬಿಜೆಪಿಯಲ್ಲಿ ಯಾವುದೂ ಶಾಶ್ವತ ಅಲ್ಲ. ಎಲ್ಲಾ ಬದಲಾವಣೆ ಆಗುತ್ತಿರುತ್ತೆ. ಕಾಲಕಾಲಕ್ಕೆ ಎಲ್ಲರೂ ಬದಲಾವಣೆ ಆಗುತ್ತಿರುತ್ತಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಧಿವೇಶನ ಮುಂದೂಡಲು ಸಂಸದರೇ ಮನವಿ ಮಾಡಿದ್ದರು: ಪ್ರಹ್ಲಾದ್ ಜೋಶಿಅಂದಹಾಗೆ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಏಪ್ರಿಲ್ 16, 17ರಂದು ನಡೆಯಲಿದ್ದು ಆ ಬಳಿಕ‌ ಸರ್ಕಾರ ಮತ್ತು ಪಕ್ಷ ಮಟ್ಟದಲ್ಲಿ ಬದಲಾವಣೆ ಆಗಲಿದೆ ಎಂಬ ಚರ್ಚೆ ಬಿಜೆಪಿ ವಲಯದಲ್ಲಿ ಜೋರಾಗ ತೊಡಗಿದೆ. ಈ ಹಿನ್ನೆಲೆಯಲ್ಲಿ ಒಕ್ಕಲಿಗ ಸಮುದಾಯಕ್ಕೆ ರಾಜ್ಯಾಧ್ಯಕ್ಷ ಪಟ್ಟ ಕಟ್ಟಬಹುದು ಎಂಬ ಲೆಕ್ಕಚಾರಗಳು ನಡೆಯುತ್ತಿವೆ.‌ ಇದನ್ನೂ ಓದಿ: ಹೆಚ್.ಡಿ ಕುಮಾರಸ್ವಾಮಿಗೆ ಕಾಳಿ ಸ್ವಾಮೀಜಿ ಧನ್ಯವಾದSign in to your account
Username or Email Address


Password

 Remember Me


