ಮೈಸೂರು: ಸೋಲಾರ್ ಪ್ಲಾಂಟ್ ಒಳಗೆ ನುಗ್ಗಿದ ಚಿರತೆ ಮರಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಿಸಿದ್ದಾರೆ.ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೇಳಾಲು ಗ್ರಾಮದ ಸಮೀಪ ಸೋಲಾರ್ ಪ್ಲಾಂಟ್‍ನಲ್ಲಿ ಎರಡು ವರ್ಷದ ಚಿರತೆ ನುಗ್ಗಿತ್ತು. ಅದಾನಿ ಗ್ರೀನ್ ಎನರ್ಜಿ ಸೋಲಾರ್ ಪವರ್ ಪ್ಲಾಂಟ್ ಒಳಗೆ ಹೋದ ಚಿರತೆ ಮರಿ ಹೊರಗೆ ಹೋಗಲಾಗದೆ ತಂತಿ ಬೇಲಿಯಲ್ಲಿ ಸಿಲುಕಿ ಕಿರುಚಾಡಿದೆ. ಇದನ್ನೂ ಓದಿ: ಮಸೀದಿ ಸೌಂಡ್ ಬ್ಯಾನ್ ಅಭಿಯಾನಕ್ಕೆ ಮುಂದಾದ ಹಿಂದೂ ಸಂಘಟನೆಗಳುಇದನ್ನ ನೋಡಿದ ಸೆಕ್ಯೂರಿಟಿ ಗಾರ್ಡ್, ಮೇಲಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ತಕ್ಷಣ ಅಧಿಕಾರಿಗಳು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಚಿರತೆಗೆ ಅರವಳಿಕೆ ಚುಚ್ಚುಮದ್ದು ನೀಡಿ, ರಕ್ಷಣೆ ಮಾಡಿದ್ದಾರೆ. ಇದನ್ನೂ ಓದಿ: ಮಸೀದಿಗಳ ಧ್ವನಿವರ್ಧಕಗಳನ್ನು ತೆಗೆಸಿ: ರಾಜ್ ಠಾಕ್ರೆSign in to your account
Username or Email Address


Password

 Remember Me


