ತುಮಕೂರು: ಹಿಂದೂ ಧರ್ಮದ ಯುವಕರು ಜಟ್ಕಾ ಮೀಟ್ ಅಂಗಡಿಗಳನ್ನು ತೆರೆಯುವ ಮೂಲಕ ಆರ್ಥಿಕವಾಗಿ ಬಲಿಷ್ಠರಾಗಿ ತಮ್ಮ ಕುಟುಂಬ ಹಾಗೂ ಹಿಂದೂ ಧರ್ಮವನ್ನು ಬಲಿಷ್ಠಗೊಳಿಸಬೇಕು ಎಂದು ಕಾಳಿ ಸ್ವಾಮೀಜಿ ಕರೆ ನೀಡಿದರು.ತುಮಕೂರಿನ ಟೌನ್‍ಹಾಲ್ ವೃತ್ತದಲ್ಲಿರುವ ನಾಗರಕಟ್ಟೆ ದೇವಾಲಯಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಏಕತೆಯ ಹಿಂದುತ್ವ ಎಲ್ಲರನ್ನು ಒಟ್ಟುಗೂಡಿಸಬೇಕು ಈ ಮೂಲಕ ಆರ್ಥಿಕವಾಗಿ ಹಿಂದೂ ಧರ್ಮದವರು ಬಲಿಷ್ಠರಾಗಬೇಕು. ಹಿಂದೂ ಧರ್ಮದ ಯುವಕರು ಜಿಲ್ಲೆಯಾದ್ಯಂತ ಹಿಂದೂ ಜಟ್ಕಾ ಮೀಟ್ ಅಂಗಡಿಯನ್ನು ತೆರೆಯಬೇಕು ಎಂದರು. ಇದನ್ನೂ ಓದಿ: ಮಸೀದಿ ಸಮೀಪ ಹನುಮಾನ್ ಚಾಲೀಸಾ ಹಾಕಿದ ಎಂಎನ್‌ಎಸ್ತುಮಕೂರು ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಹಿಂದೂ ಜಟ್ಕಾ ಮೀಟ್ ಅಂಗಡಿಗಳನ್ನು ತೆರೆದು ಹಿಂದೂ ಧರ್ಮವನ್ನು ಜಾಗೃತಗೊಳಿಸಬೇಕಾಗಿದೆ. ಹಿಂದೂ ಧರ್ಮದ ಯುವಕರು ಅಂಗಡಿಗಳನ್ನು ತೆರೆಯಲು ಮುಂದಾದರೆ ಅಂತಹ ಯುವಕರನ್ನು ಗುರುತಿಸಿ ತರಬೇತಿಗಳನ್ನು ನೀಡಿ ಅಂಗಡಿಗಳನ್ನು ತೆರೆಯಲು ಬೇಕಾದ ಸಹಕಾರವನ್ನು ತುಮಕೂರಿನ ಹಿಂದೂಪರ ಸಂಘಟನೆಗಳು ಮಾಡಲಿವೆ. ಈ ಮೂಲಕ ಹಿಂದೂ ಧರ್ಮದ ಯುವಕರ ಉದ್ಯೋಗವನ್ನು ತಾವೇ ಸೃಷ್ಟಿ ಮಾಡುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಕಾಶ್ಮೀರಿ ಪಂಡಿತರನ್ನು ಇನ್ನು ಯಾರಿಂದಲೂ ಓಡಿಸಲು ಸಾಧ್ಯವಿಲ್ಲ: ಮೋಹನ್ ಭಾಗವತ್






 Advertisement 




Sign in to your account
Username or Email Address


Password

 Remember Me


