`ಬಜಾರ್’ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಶೋಕ್ದಾರ್ನಾಗಿ ಎಂಟ್ರಿಕೊಟ್ಟ ನಟ ಧನ್ವೀರ್, ಆನಂತರ `ಬೈ ಟೂ ಲವ್’ ಚಿತ್ರದ ಸಕ್ಸಸ್ ಮೂಲಕ ಭರವಸೆಯ ನಾಯಕನಾಗಿ ಗಾಂಧಿನಗರದಲ್ಲಿ ನೆಲೆಕಂಡವರು. ಇದೀಗ ಅವರು ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.ಇತ್ತೀಚೆಗಷ್ಟೇ `ವಾಮನ’ ಚಿತ್ರದ ಮೂಲಕ ಸದ್ದು ಮಾಡಿದ್ದ ಧನ್ವೀರ್, ಆ ಚಿತ್ರದ ಬೆನ್ನಲ್ಲೇ ಮತ್ತೊಂದು ಹೊಸ ಚಿತ್ರ ಒಪ್ಪಿಕೊಂಡಿದ್ದಾರೆ. ಈ ಬಾರಿ ಅವರು `ಬೆಲ್ ಬಾಟಂ’ ಖ್ಯಾತಿಯ ನಿರ್ದೇಶಕ ಜಯತೀರ್ಥ ನಿರ್ದೇಶನದ ಹೊಸ ಚಿತ್ರಕ್ಕೆ ಸಹಿ ಮಾಡಿದ್ದಾರೆ. ಯುಗಾದಿ ಹಬ್ಬದಂದು ಮುಹೂರ್ತ ಆಚರಿಸಿಕೊಂಡು ಈ ಸಿನಿಮಾಗೆ ಇನ್ನೂ ಹೆಸರಿಟ್ಟಿಲ್ಲ. ಸರಳವಾಗಿ ಮುಹೂರ್ತ ಆಚರಿಸಿಕೊಳ್ಳುವ ಮೂಲಕ ಚಿತ್ರಕ್ಕೆ ಚಾಲನೆ ಸಿಕ್ಕಿದೆ. ಇದನ್ನೂ ಓದಿ:  ಕಷ್ಟಪಟ್ಟು ಮಾಡುವ ಸಿನಿಮಾ ಬಗ್ಗೆ ಅಪಪ್ರಚಾರ ಮಾಡಬೇಡಿ ಎಂದು ಆಲಿಯಾ ಗರಂಇದೇ ಮೊದಲ ಬಾರಿಗೆ ನಿರ್ದೇಶಕ ಜಯತೀರ್ಥ ಮತ್ತು ಧನ್ವೀರ್ ಕಾಂಬಿನೇಷನ್ನಲ್ಲಿ ಚಿತ್ರ ಮೂಡಿ ಬರುತ್ತಿದ್ದು, ಪಕ್ಕಾ ಮಾಸ್ ಆಕ್ಷನ್ ಕಥೆಯ ಜೊತೆಗೆ ಮುದ್ದಾದ ಲವ್ ಸ್ಟೋರಿ ಕೂಡ ಸಿನಿಮಾದಲ್ಲಿ ಇರಲಿದೆಯಂತೆ. ಈ ಚಿತ್ರದಲ್ಲಿ ಈವರೆಗೂ ಮಾಡಿರದೇ ಇರುವಂತಹ ಪಾತ್ರದಲ್ಲಿ ಧನ್ವೀರ್ ಕಾಣಿಸಿಕೊಳ್ಳುತ್ತಿದ್ದು, ಭಿನ್ನ ಪಾತ್ರದ ಜೊತೆಗೆ ಡಿಫರೆಂಟ್ ಗೆಟಪ್ನಲ್ಲೂ ಅವರು ಮಿಂಚಲಿದ್ದಾರೆ. ಒಂದೊಳ್ಳೆ ಪಾತ್ರ, ವಿಭಿನ್ನ ಕಥೆಯ ಕಾರಣದಿಂದಾಗಿ ನಿರ್ದೇಶಕರಿಗೆ ಗ್ರೀನ್ ಸಿಗ್ನಲ್ಲ ಕೊಟ್ಟಿದ್ದಾರೆ ಧನ್ವೀರ್. ಬಜಾರ್ ಹುಡುಗನ ಹೊಸ ಗೆಟಪ್ ನೋಡಲು ಫ್ಯಾನ್ಸ್ ಈಗಿನಿಂದಲೇ ಕಾಯ್ತಿದ್ದಾರೆ. ಇದನ್ನೂ ಓದಿ: ಸಿನಿಮಾರಂಗ ಬಿಟ್ಟು ಕೃಷಿಯತ್ತ ಮುಖ ಮಾಡಿದ್ರಾ ಸ್ಟಾರ್ ನಟಿ ಸಾಯಿ ಪಲ್ಲವಿ?Sign in to your account
Username or Email Address


Password

 Remember Me


