ಕನ್ನಡ ಸಿನಿಮಾ ರಂಗಕ್ಕೆ ಮತ್ತೋರ್ವ ನಿರ್ದೇಶಕಿಯ ಪ್ರವೇಶವಾಗಿದೆ. ಕೆನಡಾ ನಿವಾಸಿ ಬೃಂದಾ ಮುರಳೀಧರ್ ‘ಅಂತು ಇಂತು’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದು, ಕಿರುತೆರೆ, ಹಿರಿತೆರೆ ನಟಿ ಹಾಗೂ ನಿರ್ಮಾಪಕಿ‌ ಜಯಶ್ರೀ ರಾಜ್, ಬೃಂದಾ ಅವರಿಗೆ ನಿರ್ಮಾಣದಲ್ಲಿ ಸಾಥ್ ನೀಡಲಿದ್ದಾರೆ. ದಿಗಂತ್ ಈ ಚಿತ್ರದಲ್ಲಿ ನಾಯಕನಾಗಿ ನಟಿಸಲಿರುವುದು ವಿಶೇಷ. ಇದನ್ನೂ ಓದಿ: ‘Lockup’ ಶೋಗೆ ಬರುವಂತೆ ವಿಲ್ ಸ್ಮಿತ್‍ಗೆ ಆಫರ್ ಕೊಟ್ಟ ಕ್ವಿನ್ ಕಂಗನಾಈ ಕುರಿತು ಮಾತನಾಡಿರುವ ಬೃಂದಾ, ‘ನಾನು ಮೂಲತಃ ಮೈಸೂರಿವಳು. ರಂಗ ಕಲಾವಿದೆ. ಇಪ್ಪತ್ತೈದು ವರ್ಷಗಳಿಂದ ಕೆನಡಾದಲ್ಲಿದ್ದೀನಿ. ಅಲ್ಲೇ ನಾನು ಹಾಗೂ ನನ್ನ ಪತಿ ಮುರಳಿಧರ್ ನಾಟಕ ಸೇರಿದಂತೆ ಸಾಕಷ್ಟು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುತ್ತಿದ್ದೇವೆ. ನಾನು ಈ ಹಿಂದೆ ನಾಟ್ ನಾಟ್ ಎಂಬ ಇಂಗ್ಲಿಷ್ ಚಿತ್ರ ನಿರ್ದೇಶಿಸಿದ್ದೆ. ಕನ್ನಡದಲ್ಲಿ ಇದು ಮೊದಲ ಚಿತ್ರ. ಇದು ಸ್ವದೇಶದಿಂದ ವಿದೇಶಕ್ಕೆ ಹೋಗಿ ನೆಲೆಸಿರುವವರ ಕಥೆ‌. ನಾವು ಎಲ್ಲೇ ಇದ್ದರೂ ನಮ್ಮ ಹುಟ್ಟಿದ ಊರಿನ ಮಮತೆ ಸದಾ ಸೆಳೆಯುತ್ತಿರುತ್ತದೆ. ಈ ರೀತಿ ಭಾವನಾತ್ಮಕ ಕಥೆಯುಳ್ಳ ಈ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ’ ಎಂದರು. ಇದನ್ನೂ ಓದಿ: ಏಪ್ರಿಲ್ 2ಕ್ಕೆ ಕಿಚ್ಚನ ‘ವಿಕ್ರಾಂತ್ ರೋಣ’ ಟೀಸರ್ ರಿಲೀಸ್‘ನಾನು 25 ವರ್ಷಗಳಿಂದ ಸಾಕಷ್ಟು ಧಾರಾವಾಹಿ ಹಾಗೂ ಚಲನಚಿತ್ರಗಳಲ್ಲಿ  ಅಭಿನಯಿಸಿದ್ದೇನೆ. ಕಿರುತೆರೆಯಲ್ಲಿ ಹಲವು ಧಾರಾವಾಹಿಗಳನ್ನು ನಿರ್ಮಾಣ ಕೂಡ ಮಾಡಿದ್ದೇನೆ. ಇದೇ ಮೊದಲ ಬಾರಿಗೆ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದೇನೆ. ನಿರ್ದೇಶಕಿ  ಬೃಂದಾ ಅವರು ಹೇಳಿದ ಕಥೆ ಮನಸ್ಸಿಗೆ ಹತ್ತಿರವಾಯಿತು’ ಎನ್ನುವುದು ಜಯಶ್ರೀ ರಾಜ್ ಮಾತು. ಇದನ್ನೂ ಓದಿ: ಮೂರು ದಿನಕ್ಕೆ 500 ಕೋಟಿ ಬಾಚಿದ ಆರ್.ಆರ್.ಆರ್: ಬಾಕ್ಸ್ ಆಫೀಸ್ ಚಿಂದಿಚಿತ್ರಾನ್ನಅಂದಹಾಗೆ ಈ ಸಿನಿಮಾದಲ್ಲಿ ದಿಗಂತ್ ಭಾರತದಿಂದ ಕೆನಡಾಕ್ಕೆ ಬಂದ ಹುಡುಗನ ಪಾತ್ರ ಮಾಡುತ್ತಿದ್ದಾರೆ. ಗಿರಿಜಾ ಲೋಕೇಶ್, ರವಿಶಂಕರ್ ಗೌಡ ಪ್ರಮುಖ ಪಾತ್ರದಲ್ಲಿ ಇರಲಿದ್ದಾರೆ‌. ಕೆನಡಾದ ಸ್ಥಳಿಯ ತಂತ್ರಜ್ಞರು ಇದರಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ‌.Sign in to your account
Username or Email Address


Password

 Remember Me


