ಮೈಸೂರು: ಪರೀಕ್ಷಾ ಕೇಂದ್ರ ಅದಲು, ಬದಲು ಗೊಂದಲದಿಂದ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ.ಅನುಶ್ರೀ ಮೃತ ವಿದ್ಯಾರ್ಥಿನಿ. ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಮಾದಾಪುರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯಾಗಿದ್ದ ಅನುಶ್ರೀ, ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲು ಟಿ. ನರಸೀಪುರದ ವಿದ್ಯೋದಯ ಪಿಯು ಕಾಲೇಜಿಗೆ ತೆರಳಬೇಕಿತ್ತು. ಆದರೆ, ಗೊಂದಲದಿಂದ ಅನುಶ್ರೀ ಟಿ. ನರಸೀಪುರದ ಶಿವಾನಂದ ಶರ್ಮ ಇಂಗ್ಲಿಷ್ ಮಾಧ್ಯಮ ಶಾಲೆಯ ಕೇಂದ್ರಕ್ಕೆ ಹೋಗಿದ್ದಳು. ಇದನ್ನೂ ಓದಿ: ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವುಈ ವೇಳೆ ಈ ಕೇಂದ್ರದಲ್ಲಿ ಅನುಶ್ರೀ ಎಂಬ ಮತ್ತೊರ್ವ ವಿದ್ಯಾರ್ಥಿನಿ ಪರೀಕ್ಷೆ ಬರೆಯಲು ಕುಳಿತಿದ್ದಳು. ಆಗ ವಿಚಾರಣೆ ನಡೆಸಿದಾಗ ಮೇಲ್ವಿಚಾರಕರು ವಿದ್ಯೋದಯ ಪರೀಕ್ಷಾ ಕೇಂದ್ರಕ್ಕೆ ತೆರಳಲು ಸೂಚಿಸಿದ್ದರು. ಈ ಗೊಂದಲದಲ್ಲಿ 20 ನಿಮಿಷ ತಡವಾಗಿ ಪರೀಕ್ಷೆ ಬರೆಯಲು ಆರಂಭಿಸಿದ್ದ ಅನುಶ್ರೀಗೆ ಒತ್ತಡದಿಂದ ಹೃದಯಾಘಾತವಾಗಿದೆ. ಇದನ್ನೂ ಓದಿ: ಟಿಪ್ಪು ಹೆಸರಿನಲ್ಲಿ ಪೂಜೆ ಮಾಡಿದ್ರೆ ದೇವರ ಶಕ್ತಿ ಕಡಿಮೆಯಾಗುತ್ತದೆ: ಕಲ್ಲಡ್ಕ ಕಿಡಿSign in to your account
Username or Email Address


Password

 Remember Me


