ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ರಾಜ್ಯ ಪ್ರವಾಸ ಏಪ್ರಿಲ್ 5ರಂದು ನಿಗದಿಯಾಗಿತ್ತು. ಇದೀಗ ರಾಜ್ಯ ಪ್ರವಾಸ ರದ್ದುಗೊಂಡಿದೆ.ನರೇಂದ್ರ ಮೋದಿ ಮತ್ತು ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ರಾಜ್ಯ ಪ್ರವಾಸಕ್ಕೆ ದಿನ ನಿಗದಿಯಾಗಿತ್ತು. ಇದೀಗ ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಅವರಿಗೆ ಕೋವಿಡ್ ಪಾಸಿಟಿವ್ ಆಗಿರುವ ಹಿನ್ನೆಲೆಯಲ್ಲಿ ಮೋದಿ ರಾಜ್ಯ ಭೇಟಿ ರದ್ದುಗೊಳಿಸಲಾಗಿದೆ ಎಂದು ಪ್ರಧಾನಿ ಕಚೇರಿಯಿಂದ ಕರ್ನಾಟಕ ಸರ್ಕಾರಕ್ಕೆ ಮಾಹಿತಿ ರವಾನೆಯಾಗಿದೆ. ಇದನ್ನೂ ಓದಿ: ಏಪ್ರಿಲ್‍ನಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದಾರೆ ಇಸ್ರೇಲ್ ಪ್ರಧಾನಿಇಸ್ರೇಲ್ ಪ್ರಧಾನಿ ಬೆನೆಟ್ ಜೊತೆಗೆ ಮೋದಿ, ಏಪ್ರಿಲ್ 5 ರಂದು ಕರ್ನಾಟಕದಲ್ಲಿ 3 ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ನಿರ್ಧರಿಸಲಾಗಿತ್ತು. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಲೋಕಾರ್ಪಣೆ, ಟಾಟಾ ಸಹಭಾಗಿತ್ವದಲ್ಲಿ ಮೇಲ್ದರ್ಜೆಗೇರಿಸಿದ 150 ಐಟಿಐ ಉದ್ಘಾಟನೆ ಮತ್ತು ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ ಶಂಕು ಸ್ಥಾಪನೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳ ಬೇಕಿತ್ತು. ಇದೀಗ ಇದು ಮುಂದೂಡಲಾಗಿದೆ. ಇದನ್ನೂ ಓದಿ: ಸರ್ಕಾರಕ್ಕೆ ಕೋಟ್ಯಂತರ ರೂ. ನಷ್ಟ – ಬಿಎಸ್‍ವೈ ವಿರುದ್ಧ ಎಸಿಬಿಗೆ ದೂರು






 Advertisement 




Sign in to your account
Username or Email Address


Password

 Remember Me


