ಚಿಕ್ಕಬಳ್ಳಾಪುರ: ವರದಕ್ಷಿಣೆ ಕಿರುಕುಳದ ಆರೋಪದಡಿ ತಾಯಿಯೊರ್ವಳು ತನ್ನ ಮಗನ ಜೊತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹರಳಹಳ್ಳಿ ಗ್ರಾಮದಲ್ಲಿ ನಡೆದಿದೆ.ಗ್ರಾಮದ 26 ವರ್ಷದ ನವಲತ ಹಾಗೂ ಅವರ 5 ವರ್ಷದ ಮಗ ಅಂಜನ್ ಕುಮಾರ್ ಮೃತರು. ನಿನ್ನೆ ಸಂಜೆ 6 ಗಂಟೆಗೆ ತೋಟದ ಕಡೆ ಹೋದವರು ಮನೆಗೆ ವಾಪಸ್ ಬಂದಿಲ್ಲ ಅಂತ ಹುಡುಕಾಡಿದಾಗ ತೋಟದ ಬಳಿಯ ಸಂಪಿನಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದೆ. ಇದನ್ನೂ ಓದಿ: ಸತತ 3ನೇ ದಿನ ಪೆಟ್ರೋಲ್, ಡೀಸೆಲ್ ದರ ಏರಿಕೆಈ ಸಂಬಂಧ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೃತಳ ಸಂಬಂಧಿಕರು ದೂರು ದಾಖಲಿಸಿದ್ದಾರೆ. ತಮ್ಮ ಮಗಳಿಗೆ ಗಂಡ ಸೊಣ್ಣೇ ಗೌಡ, ಈತನ ತಂದೆ ರಾಮಣ್ಣ, ತಾಯಿ ಪಿಳ್ಳಮ್ಮ, ಸೋದರರಾದ ಮುರುಳಿ, ಚಂದ್ರು, ಗಾಯತ್ರಿ ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಆರೋಪಿಸಿ ದೂರು ದಾಖಲಿಸಲಾಗಿದೆ. ಇದನ್ನೂ ಓದಿ: ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆಗೆ ಸ್ವಾಗತ: ಡಿಕೆಶಿSign in to your account
Username or Email Address


Password

 Remember Me


