ಬೆಳಗಾವಿ: ಪವಿತ್ರಗಂಥ್ರ ಭಗವದ್ಗೀತೆ ಮೂಲ ಪುಸ್ತಕ ಎಲ್ಲಿದೆ? ಎಂಬುವುದರ ಕುರಿತು ಪ್ರತಿಯೊಬ್ಬ ಜನಸಾಮಾನ್ಯರ ಪ್ರಶ್ನೆಗೆ ಕೇಂದ್ರ ಸರ್ಕಾರದ ಸಂಸ್ಕೃತಿ ಸಚಿವಾಲಯದ ಬಳಿ ಯಾವುದೇ ಮಾಹಿತಿ ಇಲ್ಲ ಎಂದು ಮಾಹಿತಿ ಹಕ್ಕು ಹೋರಾಟಗಾರ, ನ್ಯಾಯವಾದಿ ಸುರೇಂದ್ರ ಉಗಾರೆ ತಿಳಿಸಿದ್ದಾರೆ.ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಭಗವದ್ಗೀತೆ ಶಾಲೆಗಳಲ್ಲಿ ಪಠ್ಯ ರೂಪದಲ್ಲಿ ನೀಡಲು ಚಿಂತನೆ ವಿಚಾರಕ್ಕೆ ಸಂಬಂಧಿಸಿದಂತೆ ಪವಿತ್ರಗಂಥ್ರ ಭಗವದ್ಗೀತೆ ಮೂಲ ಪುಸ್ತಕ ಎಲ್ಲಿದೆ? ಎಂಬುವುದರ ಕುರಿತು ಪ್ರತಿಯೊಬ್ಬ ಜನಸಾಮಾನ್ಯರ ಪ್ರಶ್ನೆಗೆ ಕೇಂದ್ರ ಸಂಸ್ಕೃತಿ ಸಚಿವಾಲಯದ ಬಳಿಯೂ ಮಾಹಿತಿ ಇಲ್ಲ. ಈ ಬಗ್ಗೆ ಮಾಹಿತಿ ಹಕ್ಕು ಮೂಲಕ ಪ್ರಶ್ನೆ ಮಾಡಲಾಗಿತ್ತು. ಕೇಂದ್ರ ಸರ್ಕಾರದಿಂದ ಈ ಬಗ್ಗೆ ಸ್ಪಷ್ಟ ಉತ್ತರ ಸಿಕ್ಕಿಲ್ಲ ಎಂದರು. ಇದನ್ನೂ ಓದಿ: ಭಗವದ್ಗೀತೆಯ ಮೂಲ ದಾಖಲೆ ನಮ್ಮಲ್ಲಿಲ್ಲ: ಕೇಂದ್ರ ಸಂಸ್ಕೃತಿ ಸಚಿವಾಲಯಭಗವದ್ಗೀತೆ ಮೂಲ ಪ್ರತಿ ಪೂರೈಕೆ, ಭಗವದ್ಗೀತೆ ಮೂಲ ಪ್ರಕಾಶಕರ ಪಟ್ಟಿ ಸೇರಿದಂತೆ ಅದಕ್ಕೆ ಸಂಬಂಧಿಸಿದ ಮಾಹಿತಿಯ ಪ್ರಶ್ನೆಗೆ ಕೇಂದ್ರ ಸರ್ಕಾರ ನಮ್ಮ ಬಳಿ ಯಾವುದೇ ಮಾಹಿತಿ ಇಲ್ಲ ಎಂದು ಉತ್ತರ ನೀಡಿದೆ. ಆದ್ರೆ, ಮಕ್ಕಳಿಗೆ ಕಲಿಸಲು ಮುಂದಾಗಿರುವುದು ಯಾವ ಭಗವದ್ಗೀತೆ? ಎಂದು ರಾಜ್ಯ ಸರ್ಕಾರಕ್ಕೆ ಸುರೇಂದ್ರ ಉಗಾರೆ ಪ್ರಶ್ನೆ ಹಾಕಿದ್ದಾರೆ. ಇದನ್ನೂ ಓದಿ: ಎಚ್ಚೆತ್ತುಕೊಳ್ಳದಿದ್ದರೆ ನಮಗೂ ಕಾಶ್ಮೀರಿ ಪಂಡಿತರದ್ದೇ ಪರಿಸ್ಥಿತಿ ಬರಬಹುದು – ಪೇಜಾವರ ಶ್ರೀ ಎಚ್ಚರಿಕೆ






 Advertisement 




Sign in to your account
Username or Email Address


Password

 Remember Me


