ಚಾಮರಾಜನಗರ: ಶನಿವಾರ ಪಾವಗಡ ಹಾಗೂ ಬೀದರ್‌ನಲ್ಲಿ ಬಸ್‌ಗಳು ಪಲ್ಟಿಯಾಗಿ 8ಕ್ಕೂ ಹೆಚ್ಚು ಮಂದಿ ದಾರುಣ ಸಾವನ್ನಪ್ಪಿದ್ದರು. ಅನೇಕರಿಗೆ ಗಂಭೀರ ಗಾಯವಾಗಿ, ಶನಿವಾರ ಕರಾಳ ದಿನ ಎನಿಸಿಕೊಂಡಿತ್ತು. ಇದರ ಬೆನ್ನಲ್ಲೇ ಭಾನುವಾರವೂ ಮತ್ತೊಂದು ಬಸ್ ಪಲ್ಟಿಯಾಗಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.ಚಾಮರಾಜನಗರದ ಹನೂರು ತಾಲೂಕು ಮಂಗಲ-ಕಾಮಗೆರೆ ನಡುವಿನ ರಸ್ತೆಯಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ ಒಂದು ಎದುರಿನಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ರಸ್ತೆ ಬದಿಯ ಹಳ್ಳಕ್ಕೆ ಮಗುಚಿ ಬಿದ್ದಿದೆ. ಇದನ್ನೂ ಓದಿ: ರಂಗಭೂಮಿ ಕಲಾವಿದೆ ಮೇಲೆ ಆ್ಯಸಿಡ್ ದಾಳಿ – ಮೂವರು ಆರೋಪಿಗಳ ಬಂಧನಅದೃಷ್ಟವಶಾತ್ ಅವಘಡದಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ. ಬಸ್ ಪಲ್ಟಿಯಾದಾಗ 10 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ಫ್ರೀ ಲಿಂಕ್ ಬಗ್ಗೆ ಇರಲಿ ಎಚ್ಚರ – ಮಂಗಳೂರಿನಲ್ಲೂ ಸೈಬರ್ ವಂಚನೆ ಬೆಳಕಿಗೆಹನೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


