ಮೈಸೂರು: ಭಗವದ್ಗೀತೆಯನ್ನು ಪಠ್ಯಕ್ರಮವಾಗಿ ಅಳವಡಿಸುವುದು ಕೊರೊನಾ ಮಹಾಮಾರಿಗಿಂತ ಮಾರಕ ಎಂದು ಮಾಜಿ ಶಿಕ್ಷಣ ಸಚಿವ ಹಾಗೂ ಶಾಸಕ ತನ್ವೀರ್ ಸೇಠ್ ಕಿಡಿಕಾರಿದರು.ರಾಜ್ಯಪಠ್ಯಕ್ರಮದಲ್ಲಿ ಭಗವದ್ಗೀತೆ ಅಳವಡಿಕೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ನಿರ್ಧಾರ ಕೊರೊನಾ ಮಹಾಮಾರಿಗಿಂತಲೂ ಮಾರಕ. ಇಂತಹ ನಿರ್ಧಾರಗಳಿಂದ ಮಕ್ಕಳು ಶೈಕ್ಷಣಿಕವಾಗಿ ಕುಂಠಿತರಾಗುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ಭಗವದ್ಗೀತೆ ಯಾವುದೇ ಧಾರ್ಮಿಕ ಗ್ರಂಥವಲ್ಲ : ಪ್ರತಾಪ್ ಸಿಂಹಚುನಾವಣೆ ವೇಳೆ ರಾಜಕಾರಣ ಮಾಡೋದು ಸರಿ. ಅಧಿಕಾರ ಬಂದ ಮೇಲೆ ಜಾತ್ಯಾತೀತವಾಗಿ ನಡೆದುಕೊಳ್ಳುಬೇಕು. ಶಿಕ್ಷಣ ಬಿಟ್ಟು ಸರ್ಕಾರ ಅನ್ಯ ವಿಚಾರಗಳ ಬಗ್ಗೆ ಗಮನಹರಿಸಬಾರದು. ಈಗಾಗಲೇ ಕೊರೊನಾದಿಂದ ಎರಡು ವರ್ಷ ಮಕ್ಕಳಿಗೆ ಶಿಕ್ಷಣ ಸಿಕ್ಕಿಲ್ಲ. ಶಾಲೆಯಲ್ಲಿ ಸಮಾನತೆ ಕಾಪಾಡಿಕೊಳ್ಳಬೇಕು. ನ್ಯಾಯಾಲಯದ ತೀರ್ಪು ಸಹ ಸ್ಪಷ್ಟವಾಗಿ ಇದನ್ನೇ ಹೇಳಿದೆ ಎಂದು ತಿಳಿಸಿದರು.ಸರ್ಕಾರ ಸಹ ಮತಾಂತರ ಕಾಯಿದೆಯಲ್ಲಿ ಬಲವಂತದ ಮತಾಂತರ ಅಪರಾಧ ಅಂತ ಹೇಳಿಕೆ ನೀಡಿದೆ. ಇದೀಗ ಶಿಕ್ಷಣದಲ್ಲಿ ಧರ್ಮದ ವಿಚಾರ ಅಳವಡಿಸುವ ಮೂಲಕ ನಿಯಮ ಉಲ್ಲಂಘನೆ ಮಾಡ್ತಿದೆ. ಭಗವದ್ಗೀತೆ ಅಳವಡಿಸೋದ್ರಿಂದ ಏನಾಗುತ್ತೆ, ಏನಾಗಲ್ಲ ಅನ್ನೊದು ಪ್ರಶ್ನೆ ಅಲ್ಲ. ಮಕ್ಕಳ ಶಿಕ್ಷಣ ವ್ಯವಸ್ಥೆಗೆ ಇದು ಬೇಡ ಎಂದು ವಿರೋಧ ವ್ಯಕ್ತಪಡಿಸಿದರು. ಇದನ್ನೂ ಓದಿ: ಎಲ್ಲ ತಿಳಿದವರೇ ಸೇರಿ ಪಠ್ಯಕ್ರಮ ರಚನೆ ಮಾಡಿದ್ದು, ಹೊಸದಾಗಿ ಸೇರಿಸೋ ಅವಶ್ಯಕತೆ ಇಲ್ಲ: ಡಿಕೆಶಿSign in to your account
Username or Email Address


Password

 Remember Me


