ಮಡಿಕೇರಿ: ಗುಜರಾತ್‍ನಲ್ಲಿ  ಭಗವದ್ಗೀತೆ ಪಠ್ಯಕ್ಕೆ ಸೇರಿಸಲಾಗುವುದು ಎಂದು ಘೋಷಣೆಯಾದ ಬೆನ್ನಲ್ಲೇ ರಾಜ್ಯದಲ್ಲಿಯೂ ಈ ಸುದ್ದಿ ಭಾರೀ ಚರ್ಚೆಯಾಗುತ್ತಿದೆ. ಈ ಕುರಿತು ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದು, ಭಗವದ್ಗೀತೆ ಯಾವುದೇ ಧಾರ್ಮಿಕ ಗ್ರಂಥವಲ್ಲ ಎಂದು ಉತ್ತರಿಸಿದರು.ಭಗವದ್ಗೀತೆ ಪಠ್ತಪುಸ್ತಕಗಳಲ್ಲಿ ಸೇರಿಸುವ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಗವದ್ಗೀತೆ ಯಾವುದೇ ಧಾರ್ಮಿಕ ಗ್ರಂಥವಲ್ಲ. ಖುರಾನ್ ಮತ್ತು ಬೈಬಲ್ ಧಾರ್ಮಿಕ ಗ್ರಂಥಗಳು. ಭಗವದ್ಗೀತೆಯಲ್ಲಿ ಜೀವನದ ಪಾಠ ಇದೆ, ನೈತಿಕತೆ ಇದೆ. ಅದು ಯಾವುದು ಸರಿ ಯಾವುದು ತಪ್ಪು ಎನ್ನುವುದನ್ನು ಭೋದಿಸುತ್ತದೆ. ಭಗವದ್ಗೀತೆ ಜೀವನದ ಮೌಲ್ಯಗಳನ್ನು ಕಲಿಸುತ್ತದೆ ಎಂದು ವಿವರಿಸಿದರು. ಇದನ್ನೂ ಓದಿ: ಗುಜರಾತ್ ಶಾಲಾ, ಕಾಲೇಜ್‍ಗಳಲ್ಲಿ ಭಗವದ್ಗೀತೆ ಕಡ್ಡಾಯಬೇರೆ ಧರ್ಮಗ್ರಂಥಗಳಂತೆ ಭಗವದ್ಗೀತೆಯನ್ನು ಭಾವಿಸಬೇಡಿ. ಇದನ್ನು ಕಂಡಿತ ಪಠ್ಯದಲ್ಲಿ ಅಳವಡಿಸಲೇಬೇಕು ಎಂದು ಕೇಳಿಕೊಂಡರು.ಹಿಜಬ್ ವಿಚಾರದಲ್ಲಿ ಕೋರ್ಟ್ ತೀರ್ಪು ಹಿನ್ನೆಲೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಧರ್ಮನೇ ಸುಪ್ರೀಂ ಅಂತ ಹೇಳುತ್ತಾರೆ. ದೇಶಕ್ಕಿಂತ ಧರ್ಮನೇ ಮುಖ್ಯ ಎನ್ನುತ್ತಿದ್ದಾರೆ. ಇದು ಹಿಜಬ್ ವಿಷಯದಲ್ಲಿ ಮತ್ತೊಮ್ಮೆ ಸಾಭೀತಾಗಿದೆ. ಕೋರ್ಟ್ ತೀರ್ಪನ್ನೇ ಧಿಕ್ಕರಿಸಿದ್ದಾರೆ. ಹಿಂದೂ-ಮುಸ್ಲಿಂ ಒಟ್ಟಿಗೆ ಇರಲು ಸಾಧ್ಯವಿಲ್ಲ ಎಂದು ಅಂಬೇಡ್ಕರ್ ಹೇಳಿದ್ದರು. ಅವರಿಗೆ ಅಂದೇ ಇದೆಲ್ಲಾ ಗೊತ್ತಾಗಿತ್ತು. ನಮ್ಮ ಜನರಿಗೆ ಈಗ ಅರ್ಥವಾಗಿದೆ ಎಂದು ಬಂದ್‍ಗೆ ಕರೆ ನೀಡಿದವರಿಗೆ ಟಾಂಗ್ ಕೊಟ್ಟರು. ಇದನ್ನೂ ಓದಿ: ಎಲ್ಲ ತಿಳಿದವರೇ ಸೇರಿ ಪಠ್ಯಕ್ರಮ ರಚನೆ ಮಾಡಿದ್ದು, ಹೊಸದಾಗಿ ಸೇರಿಸೋ ಅವಶ್ಯಕತೆ ಇಲ್ಲ: ಡಿಕೆಶಿSign in to your account
Username or Email Address


Password

 Remember Me


