ಮಂಗಳೂರು: ನಾನು ಭಗವದ್ಗೀತೆ, ಬೈಬಲ್, ಕುರಾನ್ ಯಾವುದರ ವಿರೋಧಿಯೂ ಅಲ್ಲ. ನಮ್ಮದು ಬಹುಸಂಸ್ಕೃತಿ ಇರುವ ರಾಷ್ಟ್ರ, ನಮ್ಮಲ್ಲಿ ಸಹಬಾಳ್ವೆ ಇರಬೇಕು. ಸಹಿಷ್ಣುತೆ ಮತ್ತು ಸಹಬಾಳ್ವೆಯಲ್ಲಿ ನಂಬಿಕೆ ಇರೋನು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನದ್ದು ಸಾಫ್ಟ್ ಮತ್ತು ಹಾರ್ಡ್ ಹಿಂದುತ್ವ ಅಂತ ಇಲ್ಲ. ನಾವು ಹಿಂದೂ ಧರ್ಮದ ಮೇಲೆ ನಂಬಿಕೆ ಇಟ್ಟವರು. ಎಲ್ಲಾ ಧರ್ಮಗಳಿಗೂ ಸಮಾನ ಗೌರವ ಕೊಡುತ್ತೇವೆ ಎಂದರು.ಶಾಲೆಗಳಲ್ಲಿ ಭಗವದ್ಗೀತೆ ಕಲಿಸೋ ಬಗ್ಗೆ ಚಿಂತನೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನೈತಿಕ ಶಿಕ್ಷಣ ಕಲಿಸಲು ನಮ್ಮ ಯಾವುದೇ ತಕರಾರು ಇಲ್ಲ. ನಾವು ಸಂವಿಧಾನದ ಜಾತ್ಯಾತೀತ ತತ್ವಗಳನ್ನು ನಂಬುತ್ತೇವೆ. ಭಗವದ್ಗೀತೆ, ಕುರಾನ್, ಬೈಬಲ್ ಯಾವುದನ್ನು ಹೇಳಿಕೊಟ್ಟರೂ ನಮ್ಮ ವಿರೋಧ ಇಲ್ಲ. ಆದರೆ ಮಕ್ಕಳಿಗೆ ಅಗತ್ಯವಾಗಿ ಗುಣಮಟ್ಟದ ಶಿಕ್ಷಣ ನೀಡಬೇಕು ಎಂದರು. ಇದನ್ನೂ ಓದಿ: ಖಾಲಿ ಸ್ಟ್ರಾಲರ್ಸ್ ಸಾಲಾಗಿಟ್ಟು ಯುದ್ಧದಲ್ಲಿ ಕೊಲ್ಲಲ್ಪಟ್ಟ ಮಕ್ಕಳನ್ನು ಸ್ಮರಿಸಿದ ಉಕ್ರೇನ್ಭಗವದ್ಗೀತೆ ಬಗ್ಗೆ ಸರ್ಕಾರ ತೀರ್ಮಾನ ಮಾಡಿಲ್ಲ, ಗುಜರಾತ್‍ನಲ್ಲಿ ಮಾಡಿದ್ದಾರೆ ಅಷ್ಟೇ. ಭಗವದ್ಗೀತೆ ಮನೆಯಲ್ಲಿ ಹೇಳಿಕೊಡ್ತಾರೆ, ದೇವರ ಬಗ್ಗೆ ಹೇಳ್ತಾರೆ. ರಾಮಾಯಣ, ಮಹಾಭಾರತ ಎಲ್ಲಾನೂ ಮನೆಯಲ್ಲಿ ಹೇಳಿ ಕೊಡ್ತಾರೆ. ನೈತಿಕ ಶಿಕ್ಷಣ ಬೇಕು, ಆದರೆ ಸಂವಿಧಾನಕ್ಕೆ ವಿರುದ್ಧವಾಗಿ ಯಾವುದೂ ನಡೆಯಬಾರದು ಎಂದು ತಿಳಿಸಿದರು.ಹಿಜಬ್ ವಿರೋಧಿಸಿ ಮುಸ್ಲಿಂ ಸಂಘಟನೆಗಳ ಬಂದ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಅಸಮಾಧಾನ ಇರೋರು ಬಂದ್ ಮಾಡಿದ್ದಾರೆ. ಕೋರ್ಟ್ ನಿರ್ಧಾರ ವಿರೋಧಿಸಬಾರದು. ಯಾವ ಧರ್ಮದವರೂ ಕೋಮುವಾದ ಮಾಡಬಾರದು. ಎಲ್ಲಾ ಧರ್ಮಗಳನ್ನು ಸಮಾನವಾಗಿ ಕಾಣುವ ಕೆಲಸ ಆಗಲಿ ಎಂದು ಸಲಹೆ ನೀಡಿದರು.ಕಾಶ್ಮೀರ್ ಫೈಲ್ ಚಿತ್ರ ಕನ್ನಡಕ್ಕೆ ಡಬ್ ಮಾಡುವ ವಿಚಾರವಾಗಿ ಮಾತನಾಡಿದ ಅವರು, ಸಿನಿಮಾ ಮಾಡಿ ತೋರಿಸೋದನ್ನ ಬೇಡ ಅನ್ನಲ್ಲ, ಆದರೆ ಸತ್ಯ ತೋರಿಸಲಿ. ಕಾಶ್ಮೀರದ ಉಗ್ರರ ಕೃತ್ಯ, ಪಂಡಿತರ ಜೊತೆಗೆ ಬೇರೆ ಯಾರಿಗೆ ಸಮಸ್ಯೆ ಆಗಿತ್ತು ಹೇಳಬೇಕು. ಆಗ ಯಾರ ಸರ್ಕಾರ ಇತ್ತು, ಏನ್ ಮಾಡಿತ್ತು ಸರ್ಕಾರ ಎಂದು ತೋರಿಸಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಭಗವದ್ಗೀತೆ ಯಾವುದೇ ಧಾರ್ಮಿಕ ಗ್ರಂಥವಲ್ಲ: ಪ್ರತಾಪ್ ಸಿಂಹಕಾಶ್ಮೀರ್ ಫೈಲ್ಸ್ ರೀತಿಯೇ ಗುಜರಾತ್ ಘಟನೆ, ಲಖಿನ್ ಪುರ್ ಘಟನೆ ಎಲ್ಲಾನೂ ತೋರಿಸಬೇಕು. ನಾನು ಸಿನಿಮಾಗೆ ಹೋಗಲ್ಲ, ಥಿಯೇಟರ್ ಹೋಗಿ ಸಿನಿಮಾ ನೋಡಲ್ಲ. ಬಹಳ ಸಿನಿಮಾ ನೋಡಲ್ಲ, ಹಾಗೇನೇ ಕಾಶ್ಮೀರ್ ಫೈಲ್ ಕೂಡ ನೋಡಲ್ಲ ಎಂದರು.Sign in to your account
Username or Email Address


Password

 Remember Me


