ಬೆಂಗಳೂರು: ನಟ ದರ್ಶನ್ (Challenging Star Darshan) ಟೀಂನಿಂದ ಕೊಲೆಯಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ತಂದೆ-ತಾಯಿ ಇಂದು ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ.ಮಾಜಿ ಸಚಿವ ಆಂಜನೇಯ ನೇತೃತ್ವದಲ್ಲಿ ಕಾವೇರಿ ನಿವಾಸದಲ್ಲಿ ಭೇಟಿಯಾದ ಪೋಷಕರು ಸಿಎಂ ಮುಂದೆ ಅಳಲು ತೋಡಿಕೊಂಡರು. ಸಿಎಂ ಭೇಟಿ ವೇಳೆ ತಮ್ಮ ಮನೆಯ ಪರಿಸ್ಥಿತಿಯ ಬಗ್ಗೆ ಹೇಳಿಕೊಂಡು ರೇಣುಕಾಸ್ವಾಮಿ ತಂದೆ-ತಾಯಿ ಕಣ್ಣೀರು ಹಾಕಿದರು.ಚಿತ್ರದುರ್ಗದ ರೇಣುಕಾಸ್ವಾಮಿ ಅವರ ತಂದೆ, ತಾಯಿ ಇಂದು ಕಾವೇರಿಯಲ್ಲಿ ಮುಖ್ಯಮಂತ್ರಿ @siddaramaiah ಅವರನ್ನು ಭೇಟಿಯಾಗಿ ಕುಟುಂಬಕ್ಕೆ ಏಕೈಕ ಆಧಾರವಾಗಿದ್ದ ಪುತ್ರನ ಅಗಲಿಕೆಯಿಂದ ಎದುರಾಗಿರುವ ಸಂಕಷ್ಟವನ್ನು ವಿವರಿಸಿ, ರೇಣುಕಾಸ್ವಾಮಿಯ ಪತ್ನಿಗೆ ಸರ್ಕಾರಿ ಉದ್ಯೋಗ ಕೊಡಿಸುವಂತೆ ಮನವಿ ಮಾಡಿದರು. ನಮ್ಮ ಸರ್ಕಾರವು ರೇಣುಕಾಸ್ವಾಮಿಯ ಸಾವಿಗೆ… pic.twitter.com/buIq0U3wNd— CM of Karnataka (@CMofKarnataka) June 25, 2024ಸದ್ಯ ಪೊಲೀಸರ ತನಿಖೆ ಬಗ್ಗೆ ಸಮಾಧಾನ ವ್ಯಕ್ತಪಡಿಸಿದ ರೇಣುಕಾಸ್ವಾಮಿ ತಂದೆ-ತಾಯಿ, ಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ ನೀಡುವಂತೆ ಮನವಿ ಮಾಡಿದ್ರು. ಪೋಷಕರ ಮನವಿಗೆ ಸಿಎಂ ಸಕಾರಾತ್ಮಕವಾಗಿ ಸ್ಪಂದನೆ ನೀಡಿದ್ರು. ಇದನ್ನೂ ಓದಿ: ಪವಿತ್ರಾಗೌಡ ಬಂಧನವಾದಾಗ ವಿಚಾರಣೆ ತಂಡದಲ್ಲಿದ್ದ ಮಹಿಳಾ ಪಿಎಸ್‌ಐಗೆ ನೋಟಿಸ್ಜೂನ್ 8 ರಂದು ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಕಿಡ್ನಾಪ್ ಮಾಡಿ ಬೆಂಗಳೂರಿಗೆ ಕರೆತರಲಾಗಿತ್ತು. ಅಲ್ಲಿಂದ ಪಟ್ಟಣಗೆರೆ ಶೆಡ್‍ಗೆ ಕರೆದೊಯ್ದು ಚಿತ್ರಹಿಸೆ ನೀಡಿ ದರ್ಶನ್ & ಗ್ಯಾಂಗ್ ಬರ್ಬರವಾಗಿ ಕೊಲೆ ಮಾಡಿತ್ತು. ಕೊಲೆ ಬಳಿಕ ಮೃತದೇಹವನ್ನು ಸುಮ್ಮನಹಳ್ಳಿ ಮೊರಿ ಬಳಿ ಎಸೆಯಲಾಗಿತ್ತು.ಇತ್ತ ನಾಲ್ವರು ಕಾಮಾಕ್ಷಿಪಾಳ್ಯ ಠಾಣೆಗೆ ತೆರಳಿ ಹಣದ ವಿಚಾರಕ್ಕೆ ಕೊಲೆ ಮಾಡಲಾಗಿದೆ ಎಂದು ನಾಲ್ವರು ಶರಣಾಗಿದ್ದರು. ಇದರಿಂದ ಸಂಶಯಗೊಂಡ ಪೊಲೀಸರು ತನಿಖೆ ಚುರುಕುಗೊಳಿಸಿದಾಗ ನಿಜ ಬಣ್ಣ ಬಯಲಾಗಿದೆ. ಪ್ರಕರಣ ಸಂಬಂಧ 17 ಆರೋಪಿಗಳನ್ನು ಬಂಧಿಸಲಾಗಿದ್ದು, ಜೈಲಿಗಟ್ಟಲಾಗಿದೆ.Sign in to your account
Username or Email Address


Password

 Remember Me


