ಬೆಂಗಳೂರು: ವಿದ್ಯಾರ್ಥಿಗಳು ಆಯಾ ಶಾಲಾ-ಕಾಲೇಜುಗಳು ಸೂಚಿಸುವ ಸಮವಸ್ತ್ರ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೈಕೋರ್ಟ್ ನೀಡಿರುವ ತೀರ್ಪು ಸ್ವಾಗತಾರ್ಹವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.ಕೋರ್ಟ್ ತೀರ್ಪು ನೀಡಿದ ನಂತರ ಮಾತನಾಡಿದ ಅವರು, ರಾಜ್ಯ ಹೈಕೋರ್ಟ್ ಸಮವಸ್ತ್ರದ ವಿಚಾರದಲ್ಲಿ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದೆ. ಇದನ್ನು ಎಲ್ಲ ವಿದ್ಯಾರ್ಥಿಗಳೂ ಗೌರವಿಸಿ, ಪಾಲಿಸಬೇಕು ಎಂದಿದ್ದಾರೆ. ಇದನ್ನೂ ಓದಿ: ಮಂಗಳವಾರ ಬೆಳಗ್ಗೆ 10:30ಕ್ಕೆ ಹಿಜಬ್‌ ಹೈಕೋರ್ಟ್‌ ತೀರ್ಪುಯಾವುದೇ ಧರ್ಮದ ಮಕ್ಕಳಾದರೂ ಶಿಕ್ಷಣಕ್ಕೆ ಆದ್ಯ ಗಮನ ಕೊಟ್ಟು, ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳುವುದರ ಕಡೆಗೆ ಗಮನ ಕೊಡಬೇಕು. ಯಾವುದೇ ಧಾರ್ಮಿಕ ವಸ್ತ್ರಗಳತ್ತ ಅನಗತ್ಯ ಆದ್ಯತೆ ನೀಡುವ ಮೂಲಕ ಬದುಕಿನ ಸದವಕಾಶಗಳನ್ನು ವ್ಯರ್ಥ ಮಾಡಿಕೊಳ್ಳಬಾರದು. ಈ ಮೂಲಕ ಎಲ್ಲರೂ ಸೌಹಾರ್ದದಿಂದ ಮತ್ತು ಪರಸ್ಪರ ಗೌರವದಿಂದ ಬದುಕಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಹಿಜಬ್‌ ಇಸ್ಲಾಂ ಧರ್ಮದ ಅಗತ್ಯದ ಆಚರಣೆ ಅಲ್ಲ: ಹೈಕೋರ್ಟ್‌ ಐತಿಹಾಸಿಕ ತೀರ್ಪುಹಿಂದೆಂದೂ ಶಾಲಾ-ಕಾಲೇಜುಗಳಲ್ಲಿ ಇಂತಹ ವಿವಾದ ಕಂಡುಬಂದಿರಲಿಲ್ಲ. ಕೆಲವು ವಿಚ್ಛಿದ್ರಕಾರಿ ಶಕ್ತಿಗಳು ಬೇಕೆಂದೇ ಈ ವಿವಾದವನ್ನು ಸೃಷ್ಟಿಸಿದ್ದವು. ನ್ಯಾಯಾಲಯವು ಈ ವಿಚಾರವನ್ನು ಆಳವಾಗಿ ಅಧ್ಯಯನ ಮಾಡಿ, ಸರಿಯಾದ ತೀರ್ಪು ನೀಡಿದೆ. ಈ ಮೂಲಕ ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಕ್ಕೆ ಇದು ಒಂದು ಮಹತ್ವದ ತೀರ್ಪು ಆಗಿದೆ ಎಂದು ಸ್ವಾಗತಿಸಿದ್ದಾರೆ.Sign in to your account
Username or Email Address


Password

 Remember Me


