ಉಡುಪಿ: ಹಿಜಬ್ ಕುರಿತಂತೆ ಕಾಲೇಜು ಆಡಳಿತ ಮಂಡಳಿ ಪರವಾಗಿ ತೀರ್ಪು ಬರಬಹುದು. ಯಾವುದೇ ಧಾರ್ಮಿಕ ಆಚರಣೆಗೆ ಶಿಕ್ಷಣ ಸಂಸ್ಥೆಯಲ್ಲಿ ಅವಕಾಶ ಇಲ್ಲ. ಕೆಲ ಮತಾಂದ ಶಕ್ತಿಗಳಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಸಮಸ್ಯೆ ಆಯ್ತು ಎಂದು ಉಡುಪಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪಾಧ್ಯಕ್ಷ ಯಶ್ ಪಾಲ್ ಸುವರ್ಣ ಹೇಳಿದರು.ಉಡುಪಿಯಲ್ಲಿ ಮಾತನಾಡಿದ ಅವರು, ಹೈಕೋರ್ಟ್‍ನ ಮಧ್ಯಂತರ ತೀರ್ಪಿನಲ್ಲಿ ಉಲ್ಲೇಖ ಆಗಿದೆ. ಮತಾಂಧ ಶಕ್ತಿಗಳ, ದೇಶದ್ರೋಹಿ ಸಂಘಟನೆಯ ಕುಮ್ಮಕ್ಕಿನಿಂದ ವಿವಾದ ವ್ಯಾಪಿಸಿತು. ಒಂದು ಕಾಲೇಜಿನ ವಿಚಾರ ದೇಶ ಮಟ್ಟದಲ್ಲಿ ಚರ್ಚೆ ಆಯಿತು. ಲಕ್ಷಾಂತರ ವಿದ್ಯಾರ್ಥಿಗಳಿಗೆ ಹಿಜಾಬ್ ವಿವಾದದಿಂದ ಸಮಸ್ಯೆಯಾಗಿದೆ. ಹೈಕೋರ್ಟ್ ಶಿಕ್ಷಣಕ್ಕೆ ಒತ್ತು ಕೊಡುವ ತೀರ್ಪು ಕೊಡುವ ನಿರೀಕ್ಷೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಧಾರ್ಮಿಕ ಆಚರಣೆ ಶಿಕ್ಷಣಕ್ಕಿಂತ ಮುಖ್ಯ ಅಲ್ಲ: ಕೋರ್ಟ್ ತೀರ್ಪು ಏನೇ ಬಂದರೂ ನಾವು ಅದನ್ನು ಸ್ವೀಕರಿಸುತ್ತೇವೆ. ಎಲ್ಲರೂ ನಮ್ಮ ಸಂವಿಧಾನಬದ್ಧ ಕಾನೂನನ್ನ ಗೌರವಿಸಬೇಕು. ಧಾರ್ಮಿಕ ಆಚರಣೆಗಳು ಶಿಕ್ಷಣಕ್ಕಿಂತ ಮುಖ್ಯ ಅಲ್ಲ. ದೇಶದ ಅಭಿವೃದ್ಧಿ ಚಿಂತನೆಯಲ್ಲಿ ಶಿಕ್ಷಣ ಅತಿಮುಖ್ಯ. ಧಾರ್ಮಿಕ ಆಚರಣೆಗೆ ಶಿಕ್ಷಣ ಸಂಸ್ಥೆಯಲ್ಲಿ ಸೀಮಿತ ಅವಕಾಶ ಇರಬೇಕು. ನಮಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಎಲ್ಲಾ ಅವಕಾಶಗಳು ಇವೆ. ಸಂವಿಧಾನಾತ್ಮಕ ವಿಚಾರ ಆಗಿರುವುದರಿಂದ ರಾಜ್ಯದಲ್ಲೇ ಸೂಕ್ತ ತೀರ್ಪು ಬರಬಹುದು. ಸುಪ್ರೀಂಕೋರ್ಟ್ ಮೆಟ್ಟಿಲೇರಿದರೂ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಎತ್ತಿ ಹಿಡಿಯುವ ಸಾಧ್ಯತೆ ಹೆಚ್ಚು ಎಂದರು. ಇದನ್ನೂ ಓದಿ:  ಹಿಜಬ್ ವಿವಾದ- ಈ ಹಿಂದೆ ಹೈಕೋರ್ಟ್ ತ್ರಿಸದಸ್ಯ ಪೀಠದಲ್ಲಿ ಹೇಗಿತ್ತು ವಾದ-ಪ್ರತಿವಾದ..?ಹಿಜಬ್ ವಿವಾದ ಶಿಕ್ಷಣ ವ್ಯವಸ್ಥೆಗೆ ಕೊಳ್ಳಿ ಇಡುವ ಬೆಳವಣಿಗೆ. ಆರು ಜನ ವಿದ್ಯಾರ್ಥಿನಿಯರು ಬಲಿಪಶುವಾಗಿದ್ದಾರೆ. ದೇಶದ್ರೋಹಿ ಸಂಘಟನೆಗಳು ವಿದ್ಯಾರ್ಥಿಗಳ ಶಿಕ್ಷಣವನ್ನು ಕಸಿದಿವೆ. ಕ್ಷುಲ್ಲಕ ಕಾರಣಕ್ಕೆ ಇಡೀ ರಾಜ್ಯದಲ್ಲಿ ಗೊಂದಲ ಸೃಷ್ಟಿಯಾಯಿತು ಎಂದು ಕಿಡಿಕಾರಿದರು. ಇದನ್ನೂ ಓದಿ: ತೀರ್ಪು ಏನೇ ಬಂದ್ರೂ ಗೌರವಿಸಿ, ಶಾಂತಿ ಕಾಪಾಡಿ: ಗೃಹ ಸಚಿವರ ಮನವಿಹಿಜಬ್ ವಿಚಾರದ ತೀರ್ಪು ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಂದ ಪೋನ್ ಕರೆ ಬಂದಿದ್ದು, ಯಶ್ ಪಾಲ್ ಸುವರ್ಣ ಬೆಂಗಳೂರಿಗೆ ಹೊರಟಿದ್ದಾರೆ.Sign in to your account
Username or Email Address


Password

 Remember Me


