ದಿ ಕಾಶ್ಮೀರ್ ಫೈಲ್ಸ್ ಸಿನಿಮಾಕ್ಕೆ ರಾಜ್ಯ ಸರ್ಕಾರ ತೆರಿಗೆ ವಿನಾಯಿತಿ ಘೋಷಿಸಿರುವುದನ್ನು ಕನ್ನಡ ಸಂಘಟನೆಗಳು ವಿರೋಧಿಸುತ್ತವೆ. ಸಮಾಜದ ಸ್ವಾಸ್ಥ್ಯ ಕದಡುವ ಕಿಡಿಗೇಡಿ ಸಿನಿಮಾಗಳಿಗೆ ತೆರಿಗೆ ನಿನಾಯಿತಿ ನೀಡಬಾರದು ಎಂದು ಕರ್ನಾಟಕ ರಣಧೀರ ಪಡೆ  ಆಗ್ರಹಿಸಿದ್ದಾರೆ. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ : ಅಂಥದ್ದೇನಿದೆ ಸಿನಿಮಾದಲ್ಲಿ? ದಳ್ಳುರಿಯಲ್ಲಿ ದಹನದ ಕಥನ!ದಿ ಕಾಶ್ಮೀರ್ ಫೈಲ್ ಎಂಬ ಸಿನಿಮಾ ಸಮಾಜದಲ್ಲಿ ಶಾಂತಿ ಕದಡಲು ಮಾಡಿರುವ ಹುನ್ನಾರವಷ್ಟೆ. ತೆರಿಗೆ ವಿನಾಯ್ತಿ ಘೋಷಿಸಲು ಇದು ಯಾವುದೇ ಸಾಮಾಜಿಕ, ಸಾಂಸ್ಕೃತಿಕ ಕ್ರಾಂತಿ ಸಿನಿಮಾವ‍ಲ್ಲ.  ಸುಳ್ಳು ಮತ್ತು ಅತಿರಂಜಿತ ಕತೆಯನ್ನು ಭೀಬತ್ಸವಾಗಿ ತೋರಿಸಿ ಜನರ ಮಧ್ಯೆ ಅಪನಂಬಿಕೆ ಹುಟ್ಟು ಹಾಕುವ ಸಿನಿಮಾಗೆ ತೆರಿಗೆ ವಿನಾಯ್ತಿ ನೀಡುವುದು ಎಂದರೆ ಕನ್ನಡಿಗರ ತೆರಿಗೆ ಹಣಕ್ಕೆ ದೋಖಾ ಬಗೆಯುವುದು ಎಂದರ್ಥ. ಇಂತಹ ಕೃತ್ಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಮಾಡಕೂಡದು.  ಇದನ್ನೂ ಓದಿ : ಉಪೇಂದ್ರ ಅವರ ಹೊಸ ಸಿನಿಮಾದ ಪೋಸ್ಟರ್ : ಅಸಲಿನಾ? ನಕಲಾ?ಕನ್ನಡ ಚಿತ್ರೋದ್ಯಮ ಈಗ ಸಂಕಷ್ಟದಲ್ಲಿದೆ. ಕೊರೋನಾ ನಂತರ ಕನ್ನಡ ಚಿತ್ರೋದ್ಯಮದ ಸಾವಿರಾರು ಕಾರ್ಮಿಕರು ಬದುಕಿಗಾಗಿ ಪರದಾಡುತ್ತಿದ್ದಾರೆ. ಕನ್ನಡ ಚಿತ್ರೋದ್ಯಮಕ್ಕೆ ಮಿಡಿಯದ ಮುಖ್ಯಮಂತ್ರಿಗಳು ಕರ್ನಾಟಕಕ್ಕೆ ಸಂಬಂಧಪಡದ ಕಾಶ್ಮೀರ್ ಫೈಲ್ ಸಿನಿಮಾಗೆ ಯಾಕೆ ಸ್ಪಂದಿಸಿದರು ಎಂಬುದು ಎಲ್ಲರಿಗೂ ಗೊತ್ತಿದೆ‌. ರಾಜ್ಯ ಸರ್ಕಾರದ ಪರೋಕ್ಷ ಹೈಕಮಾಂಡ್ ಆಗಿರುವ ಆರ್ ಎಸ್ ಎಸ್ ಮನವೊಲಿಸಲು ಮುಖ್ಯಮಂತ್ರಿಗಳು ಕನ್ನಡಿಗರ ಖಜಾನೆಯನ್ನು ತೂತು ಮಾಡಿದ್ದಾರೆ. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ : ಬಾಲಿವುಡ್ ಮೇಲೆ ಕಿಡಿಕಾರಿದ ಕಂಗನಾ ರಣಾವತ್ಮುಖ್ಯಮಂತ್ರಿಗಳು ತಕ್ಷಣ ನಿಗೂಢ, ಅದೃಶ್ಯ ಹೈಕಮಾಂಡ್ ಮನವೊಲಿಕೆಯನ್ನು ನಿಲ್ಲಿಸಬೇಕು. ಪ್ರಜಾಸತ್ತಾತ್ಮಕವಾಗಿ ಕಾರ್ಯನಿರ್ವಹಣೆಯನ್ನು ಮುಖ್ಯಮಂತ್ರಿಗಳು ರೂಢಿಸಿಕೊಳ್ಳಬೇಕು. ಸರ್ವಜನರ ಹಿತಬಯಸುವ, ಸೌಹಾರ್ಧ ವಾತಾವರಣ ನಿರ್ಮಿಸುವ, ಸಂವಿಧಾನದ ಆಶಯದಂತೆ ನಡೆಯುವ ಸಮಾಜ ರೂಪಿಸಲು ಮುಖ್ಯಮಂತ್ರಿಗಳು ಕೆಲಸ ಮಾಡಬೇಕು. ಈ ರೀತಿ‌ ಕಿಡಿಗೇಡಿಗಳ ಸಿನಿಮಾಕ್ಕೆ ತೆರಿಗೆ ವಿನಾಯ್ತಿ ನೀಡುವುದು ಅಕ್ಷಮ್ಯ ಎಂದು ಕರ್ನಾಟಕ ರಣಧೀರ ಪಡೆ ತಿಳಿಸಿದೆ.Sign in to your account
Username or Email Address


Password

 Remember Me


