ಧಾರವಾಡ: ಪತ್ನಿಯನ್ನು ಕೊಲೆ ಮಾಡಿ ಪತಿ ಕೂಡ ಆತ್ಮಹತ್ಯೆಗೆ ಶರಣಾದ ಘಟನೆ ಧಾರವಾಡದಲ್ಲಿ ನಡೆದಿದೆ.ನಗರದ ಹೊರವಲಯದ ಗಣೇಶನಗರದಲ್ಲಿ ಈ ಘಟನೆ ನಡೆದಿದ್ದು, ಚಟ್ಟು ತನ್ನ ಪತ್ನಿ ಮನಿಷಾಳನ್ನು ಹತ್ಯೆಗೈದು ನೇಣಿಗೆ ಶರಣಾಗಿದ್ದಾನೆ. ಕಳೆದ ರಾತ್ರಿ ಇದೇ ಬಡಾವಣೆಯ ತನ್ನ ತಾಯಿಯ ಮನೆಯಲ್ಲಿ ಇದ್ದ ಮನಿಷಾ, ಪತಿಗೆ ಊಟ ಕೊಡಲು ಬಂದು, ಪತಿಯ ಮನೆಯಲ್ಲಿಯೇ ಮಲಗಿದ್ದಳು. ರಾತ್ರಿ ಕುಡಿದು ಪತ್ನಿಯ ಜೊತೆ ಜಗಳ ಮಾಡಿದ ಚಟ್ಟು, ಪತ್ನಿ ಮಲಗಿದ್ದಾಗ ಕಬ್ಬಿಣದ ರಾಡ್‍ನಿಂದ ಹೊಡೆದು ಕೊಲೆ ಮಾಡಿ, ನಂತರ ತಾನು ಕೂಡ ನೇಣು ಹಾಕಿಕೊಂಡಿದ್ದಾನೆ. ಇದನ್ನೂ ಓದಿ: ಯುಪಿ ಚುನಾವಣಾ ಫಲಿತಾಂಶ ನಮಗೊಂದು ಪಾಠ: ಮಾಯಾವತಿಕಳೆದ ಮೂರು ದಿನಗಳ ಹಿಂದೆ ಕೂಡಾ ಚಟ್ಟು ಆತ್ಮಹತ್ಯೆಗೆ ಯತ್ನಿಸಿದ್ದ ಎಂದು ತಿಳಿದು ಬಂದಿದೆ. ಆದರೆ ಪತ್ನಿ ಇದನ್ನು ತಡೆದಿದ್ದಳು. ಗೋವಾದಲ್ಲಿ ಪೈಪ್ ಲೈನ್ ಕೆಲಸ ಮಾಡುತಿದ್ದ ಚಟ್ಟು ಕಳೆದ ವಾರವಷ್ಟೇ ಧಾರವಾಡಕ್ಕೆ ಬಂದಿದ್ದ. ಈ ದಂಪತಿಗೆ ಇಬ್ಬರು ಮಕ್ಕಳು ಕೂಡಾ ಇದ್ದಾರೆ. ಸದ್ಯ ಉಪನಗರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ವಿಶ್ವ ಮಹಿಳಾ ದಿನಾಚರಣೆ – ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕರಿಗೆ ಗೌರವ
Husband, wife, policeman, DharwadSign in to your account
Username or Email Address


Password

 Remember Me


