ದಕ್ಷಿಣದ ಖ್ಯಾತ ನಿರ್ದೇಶಕ ರಾಜಮೌಳಿ ಅವರ ಎರಡು ಸಿನಿಮಾದಲ್ಲಿ ಈಗಾಗಲೇ ನಟಿಸಿರುವ ಕಿಚ್ಚ ಸುದೀಪ್, ಇದೀಗ ಅವರ ಮತ್ತೊಂದು ಸಿನಿಮಾದಲ್ಲಿ ಒಂದಾಗಿದ್ದಾರೆ. ಅದು ಆರ್.ಆರ್.ಆರ್ ಸಿನಿಮಾದಲ್ಲಿಯೇ ಎನ್ನುವುದು ಬಿಗ್ ಸರ್ ಪ್ರೈಸ್. ಇದನ್ನೂ ಓದಿ : ಮಾ.11ರ 12:46 ವೇಳೆ ಸೇವ್ ಮಾಡ್ಕೊಳ್ಳಿ: ಕನ್ ಫ್ಯೂಸ್ ಮಾಡಿದ ಉಪೇಂದ್ರ“ಈಗ’ ಮತ್ತು ‘ಬಾಹುಬಲಿ’ ಸಿನಿಮಾದಲ್ಲಿ ಕಿಚ್ಚನಿಗೆ ಒಂದೊಳ್ಳೆ ಪಾತ್ರ ಕೊಟ್ಟು ತಮ್ಮ ಟೀಮ್ ಗೆ ಸೇರಿಸಿಕೊಂಡಿದ್ದರು ರಾಜಮೌಳಿ. ಮತ್ತೆ ಮತ್ತೆ ಸುದೀಪ್ ಅವರ ಜತೆ ಸಿನಿಮಾ ಮಾಡುವ ಇಂಗಿತವನ್ನೂ ಅವರು ವ್ಯಕ್ತ ಪಡಿಸಿದ್ದರು. ಆದರೆ, ಆರ್.ಆರ್.ಆರ್ ಸಿನಿಮಾದಲ್ಲಿ ಸುದೀಪ್ ಅವರಿಗೆ ಸೂಟ್ ಆಗುವಂತಹ ಪಾತ್ರ ಇರಲಿಲ್ಲವಂತೆ. ಹಾಗಾಗಿ ಈ ಸಿನಿಮಾದಲ್ಲಿ ಕಿಚ್ಚನಿಗೆ ನಟಿಸುವುದಕ್ಕೆ ಆಗಲಿಲ್ಲ. ಆದರೇನಂತೆ, ಈ ಸಿನಿಮಾದಲ್ಲಿಯೂ ಕಿಚ್ಚ ಇರಲಿದ್ದಾರೆ. ಅದು ಟ್ರೇಲರ್ ರೂಪದಲ್ಲಿ ಎನ್ನುವುದು ವಿಶೇಷ. ಇದನ್ನೂ ಓದಿ : ಸ್ಸಾರಿ.. ಈ ಬಾರಿ ಹುಟ್ಟು ಹಬ್ಬ ಆಚರಿಸಲ್ಲ : ಜಗ್ಗೇಶ್ಇನ್ನೇರಡು ವಾರ ಕಳೆದರೆ, ಆರ್.ಆರ್.ಆರ್ ಸಿನಿಮಾ ತೆರೆಯ ಮೇಲಿರುತ್ತದೆ. ಇತ್ತ ಸುದೀಪ್ ನಟನೆಯ ವಿಕ್ರಾಂತ್ ರೋಣ ಕೂಡ ಬಿಡುಗಡೆಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಸಿನಿಮಾದ ಟ್ರೇಲರ್ ಅನ್ನು ಆರ್.ಆರ್.ಆರ್ ಸಿನಿಮಾ ತೆರೆಕಂಡ ಚಿತ್ರಮಂದಿರಗಳಲ್ಲಿ ಒಟ್ಟಿಗೆ ನೋಡಬಹುದಂತೆ. ಆಗೊಂದು ಪ್ಲ್ಯಾನ್ ಮಾಡಿದೆ ಚಿತ್ರತಂಡ. ಇದನ್ನೂ ಓದಿ : ಟ್ರೋಲಿಗರ ಚಳಿ ಬಿಡಿಸಿದ ಸನ್ನಿ ಲಿಯೋನ್ಆರ್.ಆರ್.ಆರ್ ಸಿನಿಮಾ ಪ್ರದರ್ಶನ ಕಾಣುವಾಗ ತಮ್ಮೊಂದು ಟ್ರೇಲರ್ ತೋರಿಸಲು ಈಗಾಗಲೇ ಸಾಕಷ್ಟು ಚಿತ್ರ ನಿರ್ಮಾಪಕರು ರಾಜಮೌಳಿ ಅವರಿಗೆ ಮನವಿ ಮಾಡಿಕೊಂಡಿದ್ದಾರಂತೆ. ಆದರೆ, ಸಿನಿಮಾ ಉದ್ದ ಇರುವ ಕಾರಣಕ್ಕಾಗಿ ಹೆಚ್ಚಿನ ಚಿತ್ರಗಳಿಗೆ ಅವಕಾಶ ಸಿಕ್ಕಿಲ್ಲ. ಕಿಚ್ಚ ಸುದೀಪ್ ಅವರಿಗೂ ರಾಜಮೌಳಿ ಅವರಿಗೆ ಒಳ್ಳೆಯ ಬಾಂಧವ್ಯ ಇದೆ. ಹಾಗಾಗಿ ಆರ್.ಆರ್.ಆರ್ ಸಿನಿಮಾ ಮಧ್ಯೆ ವಿಕ್ರಾಂತ್ ರೋಣನಿಗೆ ಎಂಟ್ರಿ ಸಿಕ್ಕಿದೆ.Sign in to your account
Username or Email Address


Password

 Remember Me


