ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನ ಆಂಬ್ಯುಲೆನ್ಸ್‌ನಲ್ಲಿ ಮಹಿಳೆ ಮಗುವಿಗೆ ಜನ್ಮ ನೀಡಿದ್ದಾರೆ.ಮುಂಡಗೋಡು ತಾಲೂಕಿನ ಇಂದೂರ ಗ್ರಾಮದ ದಾವಲಬಿ ಮಹಬೂಬಷಾ ಹನಕನಹಳ್ಳಿ(19) ಹೆಣ್ಣು ಮಗುವಿಗೆ ಜನ್ಮನೀಡಿದ ಗರ್ಭಿಣಿಯಾಗಿದ್ದಾಳೆ. ಈ ಘಟನೆ ಇಂದು ರಾತ್ರಿ ನಡೆಯಿತು.ಇದು ಗರ್ಭಿಣಿಯ ಮೊದಲನೇ ಹೆರಿಗೆಯಾಗಿದ್ದು, ಅಧಿಕ ರಕ್ತದೊತ್ತಡ ಹಾಗೂ ಹೆರಿಗೆ ನೋವು ಕಾಣಿಸಿದ್ದರಿಂದ ತಾಲೂಕು ಆಸ್ಪತ್ರೆಯಯವರು ಹುಬ್ಬಳ್ಳಿ ಕಿಮ್ಸ್ ಗೆ ಕಳಿಸಿಕೊಟ್ಟಿದ್ದರು. ಹೆರಿಗೆ ನೋವು ಹೆಚ್ಚಾಗಿದ್ದರಿಂದ ವರೂರ ಬಳಿ ವಾಹನವನ್ನು ರಸ್ತೆ ಬದಿಗೆ ನಿಲ್ಲಿಸಿ ತುರ್ತು ವೈದ್ಯಕೀಯ ತಂತ್ರಜ್ಞ ಧನರಾಜ್ ಬಳೂರ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ. ಇದನ್ನೂ ಓದಿ: ಭಾರತದ ಮೇಲೆ ಯುದ್ಧದ ಎಫೆಕ್ಟ್: ಖಾದ್ಯತೈಲ, ಗೋಧಿ, ಸಿಮೆಂಟ್, ಕಬ್ಬಿಣ ದುಬಾರಿತಾಯಿ ಮಗು ಇಬ್ಬರು ಸುರಕ್ಷಿತವಾಗಿ ಇದ್ದು, ಹುಬ್ಬಳ್ಳಿ  ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಾಲಕ ಕೆಂಚೇಶ್.ಇ.ಎನ್ ಇದ್ದರು.Sign in to your account
Username or Email Address


Password

 Remember Me


