ಕಲಬುರಗಿ: ಶುಕ್ರವಾರ ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ ಬಜೆಟ್ ಅನ್ನು ಮಾಜಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಡಬಲ್ ಇಂಜಿನ್ ಬಜೆಟ್ ಅಲ್ಲ ಇದು ಡಬಲ್ ಧೋಕಾ ಬಜೆಟ್ ಎಂದು ವ್ಯಂಗ್ಯವಾಡಿದ್ದಾರೆ.ರಾಜ್ಯಸರ್ಕಾರದ ಬಜೆಟ್ ಬಗ್ಗೆ ಟ್ವೀಟ್ ಮಾಡಿದ ಖರ್ಗೆ ಬಿಜೆಪಿಯವರು ನವ ಕರ್ನಾಟಕ ನಿರ್ಮಿಸುತ್ತೇವೆ ಎಂದಿದ್ದರು. ಇವರ ಯೋಗ್ಯತೆಗೆ ಕರ್ನಾಟಕದಲ್ಲಿ ಈಗಾಗಲೇ ಇರುವುದನ್ನು ಉಳಿಸಿಕೊಂಡು ಹೋದರೆ ಸಾಕಾಗಿದೆ. ಕರ್ನಾಟಕವನ್ನು ಸಾಲದಲ್ಲಿ ಮುಳುಗಿಸಿದ್ದಾರೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಹೊಸ ಯೋಚನೆಗಳು ಬಜೆಟ್‌ನಲ್ಲಿ ಇಲ್ಲ: ಚಲುವರಾಯಸ್ವಾಮಿಬಿಜೆಪಿಯವರು ನಾವು “ನವ ಕರ್ನಾಟಕ ನಿರ್ಮಿಸುತ್ತೇವೆ” ಎಂದಿದ್ದರು.ಇವರ ಯೋಗ್ಯತೆಗೆ ಕರ್ನಾಟಕದಲ್ಲಿ ಈಗಾಗಲೇ ಇರುವುದನ್ನು ಉಳಿಸಿಕೊಂಡು ಹೋದರೆ ಸಾಕಾಗಿದೆ. ಕನಾಟಕವನ್ನು ಸಾಲದಲ್ಲಿ ಮುಳಗಿಸಿದ್ದಾರೆ.ಇದು ಡಬಲ್ ಇಂಜಿನ್ ಬಜೆಟ್ ಅಲ್ಲಾ, ಇದು ಡಬಲ್ ಧೋಕಾ ಬಜೆಟ್ ಆಗಿದೆ! #BogusBudget https://t.co/DhZQYAso3Q— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) March 4, 2022ಇದೊಂದು ಎಕನಮಿ ರಿಕವರಿ ಬಜೆಟ್ ಅಲ್ಲ. ಇದು ಎಲೆಕ್ಷನ್ ಸರ್ವೈವಲ್ ಬಜೆಟ್ ಎಂದು ಲೇವಡಿ ಮಾಡಿರುವ ಶಾಸಕರು ರಾಜ್ಯದ ಆರ್ಥಿಕ ಪುನಶ್ಛೇತನಕ್ಕೆ ಸಹಕಾರಿಯಾಗುವಂತಹ, ರೈತರಿಗೆ, ಯುವಕರಿಗೆ, ಮಹಿಳೆಯರಿಗೆ ಹಾಗೂ ಜನಸಾಮಾನ್ಯರಿಗೆ ಅನುಕೂಲವಾಗುವಂತಹ ಯಾವುದೇ ಅಂಶ ಈ ಬಜೆಟ್ ಹೊಂದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಬರೀ ಪುಸ್ತಕದ ಲೆಕ್ಕಾಚಾರದ ಜೊಳ್ಳು ಬಜೆಟ್: ಶರವಣSign in to your account
Username or Email Address


Password

 Remember Me


