ಕಾರವಾರ: ಒಂದೂವರೆ ವರ್ಷದ ಗಂಡು ಚಿರುತೆಯೊಂದು ಆಹಾರ ಅರಸಿ ಹೋಗುತಿದ್ದ ವೇಳೆ ಖಾಸಗಿ ಜಮೀನಿನಲ್ಲಿ ಹಾಕಿದ್ದ ತಂತಿ ಬೇಲಿಗೆ ಸಿಲುಕಿದ ಘಟನೆ ಶಿರಸಿ ತಾಲೂಕು ಜಾನ್ಮನೆ ವಲಯದ ಶಿರಗುಣಿ ಗ್ರಾಮದಲ್ಲಿ ನಡೆದಿದೆ.ಚಿರತೆ ಚೀರಾಟ ಕೇಳಿದ ಸ್ಥಳೀಯರು ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಶಿವಮೊಗ್ಗ ವನ್ಯಜೀವಿ ವಲಯದ ವೈದ್ಯರ ತಂಡಕ್ಕೆ ಮಾಹಿತಿ ನೀಡಿದ್ದು, ಹಲವು ಗಂಟೆಗಳ ರಕ್ಷಣಾ ಕಾರ್ಯಾಚರಣೆ ಮೂಲಕ ಕೊನೆಗೂ ಚಿರತೆಯನ್ನು ಜೀವಂತ ರಕ್ಷಿಸುವಲ್ಲಿ ಸಫಲರಾಗಿದ್ದಾರೆ. ಇದನ್ನೂ ಓದಿ: ಕಳೆದ 4 ದಿನಗಳಿಂದ ಮಗ ಸಂಪರ್ಕಕ್ಕೆ ಸಿಗುತ್ತಿಲ್ಲ: ಪೋಷಕರು ಆತಂಕಈ ಹಿಂದೆ ಶಿರಸಿ ಭಾಗದಲ್ಲಿ ಕಪ್ಪು ಚಿರತೆಯೊಂದು ತಂತಿಗೆ ಸಿಲುಕಿದ್ದಾಗ ರಕ್ಷಣಾ ಕಾರ್ಯ ತಡವಾಗಿದ್ದರಿಂದ ಸಾವು ಕಂಡಿತ್ತು. ಈ ಬಾರಿ ಶಿರಸಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್‍ಜಿ ಹೆಗಡೆ ನೇತ್ರತ್ವದಲ್ಲಿ ಶಿವಮೊಗ್ಗದ ವನ್ಯಜೀವಿ ವೈದ್ಯರ ಸಹಕಾರದಿಂದ ಚಿರತೆಯನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಡಲಾಯಿತು. ಇದನ್ನೂ ಓದಿ: ಮೇಕ್ ಇನ್ ಇಂಡಿಯಾದಲ್ಲಿ ಇನ್ನೂ ದೊಡ್ಡದಾಗಿ ಯೋಚಿಸಬೇಕಿದೆ: ಮೋದಿSign in to your account
Username or Email Address


Password

 Remember Me


