ಬೆಳಗಾವಿ: ರಾಜ್ಯದಲ್ಲಿ ಹಿಜಬ್ ವಿಚಾರಕ್ಕೆ ದೊಡ್ಡ ಚರ್ಚೆ ನಡೀತಿದೆ. ಆದರೆ ತಾಯಿ ಕಿತ್ತೂರು ಚೆನ್ನಮ್ಮ ಹಾಕಿರುವ ಸೆರಗನ್ನು ಹಾಕಲು ಅವಕಾಶ ಕೊಡಬೇಕು. ಸೀರೆಯ ಸೆರಗು ಹೆಣ್ಮಕ್ಕಳಿಗೆ ಕಳೆ ಇದ್ದಂತೆ. ಅದೇ ಒಂದು ರೂಪ, ಮಹಾಲಕ್ಷ್ಮಿ ಕಂಡಂತೆ ಕಾಣ್ತಾರೆ. ಸೆರಗು ಇಲ್ಲದ ತಲೆ ತಲೆಯಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಹೇಳಿದರು.ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ತಾಯಿ ಕಿತ್ತೂರು ಚೆನ್ನಮ್ಮ ಹಾಕಿರುವ ಸೆರಗು ಹಾಕಲು ಅವಕಾಶ ಕೊಡಬೇಕು. ತಲೆ ಮೇಲೆ ಸೆರಗು ಹಾಕಲು ಯಾರು ಬೇಡ ಅಂತಾರೆ ಇದು ವಿಚಿತ್ರ ಇದೆ. ಇದಕ್ಕೆ ಕೋರ್ಟ್ ಗೆ ಹೋಗಬೇಕಾ, ಕಿತ್ತೂರು ಚೆನ್ನಮ್ಮ, ಝಾನ್ಸಿರಾಣಿ ಲಕ್ಷ್ಮೀ ಬಾಯಿ, ಇಂದಿರಾಗಾಂಧಿ ಸೇರಿದಂತೆ ಮಾಜಿ ರಾಷ್ಟ್ರೀಯ ಪತ್ರಿಭಾ ಪಾಟೀಲ್ ಕೂಡ ಸೆರಗನ್ನು ಹಾಕಿದ್ದರು. ಆದರೆ, ಈಗ ನನ್ನ ಮಗಳಿಗೆ ಸೆರಗು ಹಾಕಬೇಡ ಅಂದರೆ ಹೇಗೆ? ಸೆರಗು ಹೆಣ್ಣಿಗೆ ಕಳೆ ಇದ್ದಂತೆ. ಅದೇ ಒಂದು ರೂಪ. ಸೆರಗು ಇಲ್ಲದ ತಲೆ ತಲೆಯಲ್ಲ ಎಂದು ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಉಕ್ರೇನ್‍ನಲ್ಲಿ ಭಾರತೀಯರು ಸಿಲುಕಿರುವಾಗ, ಮೋದಿ ಯುಪಿ ಚುನಾವಣಾ ಸಭೆಗಳಲ್ಲಿ ನಿರತರಾಗಿದ್ದಾರೆ: ಮಮತಾ ಬ್ಯಾನರ್ಜಿ ಕಿಡಿಸಿಎಂ ಬಸವರಾಜ್ ಬೊಮ್ಮಾಯಿ ನಿಮ್ಮ ಅವ್ವಾನೂ ಸೆರಗು ಹಾಕ್ತಿದ್ಳೂ ಮರಾಯಾ. ನೀನು ನಿನ್ನ ಸೊಸೆಗೂ ಸೆರಗು ಹಾಕಿಸು. ನನ್ನ ಮಗಳು ಸೆರಗನ್ನು ಹಾಕಿಕೊಂಡು ಹೋಗ್ಲಿ ಅಂತಾ ಹೇಳು. ಆದ್ರೆ, ಅದಕ್ಕೆ ಜಾತಿ ಬಣ್ಣ ಕಟ್ಟಬೇಡಿ ಎಂದು ನಾನು ಪ್ರಾರ್ಥನೆ ಮಾಡಿಕೊಳ್ಳುತ್ತೇನೆ. ಬಿಜೆಪಿಯವರಿಗೆ ಕೆಲಸವಿಲ್ಲ. ಹೀಗಾಗಿ ವೋಟ್ ಬರುತ್ತೆ ಅಂತಾ ಹೀಗೆ ಮಾಡ್ತಿದ್ದಾರೆ ಎಂದು ಸಿಎಂ ವಿರೋಧ ಕಿಡಿಕಾರಿದರು.ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ವಿಚಾರಕ್ಕೆ ಸಂಬಂಧಿಸಿದಂತೆ, ನಿನ್ನೆ ಆಳಂದದಲ್ಲಿ ಮೂರು ಜನರು ಹೋಗಿ ಪೂಜೆ ಮಾಡಿದ್ರು ಆಗ್ತಿತ್ತು. ಆದ್ರೆ, ಬಿಜೆಪಿಯವರು ಬೇಕಂತಲೇ ಪ್ಲಾಗ್ ತೆಗೆದುಕೊಂಡು ಹೋಗಿದ್ದಾರೆ. ಇದರಿಂದಾಗಿ ಈಗಾಗಲೇ ಇಬ್ಬರು ಸಾವನ್ನಪ್ಪಿದ್ದಾರೆ. ನಾಳೆಗೆ ನಾನೂ ಅಲ್ಲಿಗೆ ಹೋಗ್ತಿದ್ದೇನೆ. ಸಮಸ್ಯೆ ಬಗೆಹರಿಸುತ್ತೇನೆ. ಶಾಂತಿ ತರಲು ಪ್ರಯತ್ನ ಮಾಡ್ತಿದ್ದೇನೆ. ಬಿಜೆಪಿಯವರು ಹುಬ್ಬಳ್ಳಿ, ಮುಧೋಳ ಹಾಗೂ ಸಿಂಧಗಿಯಲ್ಲಿ ಕೆಡಿಸಿದ್ರು, ಅದನ್ನು ಸರಿ ಮಾಡಿದ್ದೇವೆ. ಅದರಂತೆ ಆಳಂದದಲ್ಲಿರುವ ಘಟನೆಯನ್ನು ಸರಿ ಮಾಡುತ್ತೇವೆ ಎಂದು ಭರವಸೆ ಕೊಟ್ಟರು.ಉಕ್ರೇನ್ ವಿದ್ಯಾರ್ಥಿಗಳ ವಿಚಾರ ಕುರಿತು ಮಾತನಾಡಿದ ಅವರು, ಕೇಂದ್ರ ಸರ್ಕಾರ ಉಕ್ರೇನ್‍ನಲ್ಲಿ ಸಿಲುಕಿದ ವಿದ್ಯಾರ್ಥಿಗಳನ್ನ ತರುವಲ್ಲಿ ವಿಫಲವಾಗಿದೆ. ಮೂರು ತಿಂಗಳ ಮುಂಚೆಯೇ ಯುದ್ಧ ಆಗುತ್ತೆ ಎಂದು ಕೇಂದ್ರ ಸರ್ಕಾರಕ್ಕೆ ಗೊತ್ತಿತ್ತು. ಆದರೂ ಭಾರತೀಯರನ್ನು ಕರೆದುಕೊಂಡು ಬಂದಿಲ್ಲ. ಇತ್ತ ಏರ್ ಇಂಡಿಯಾ ಕಂಪನಿ ಮಾರಾಟ ಮಾಡಬೇಡಿ ಅಂತಾ ಹೇಳಿದ್ವಿ. ಆದರೂ ನರೇಂದ್ರ ಮೋದಿ ವಿಮಾನ ಮಾರಾಟ ಮಾಡಿದ್ರು ಎಂದು ವಿರೋಧ ವ್ಯಕ್ತಪಡಿಸಿದರು.ನಮ್ಮ ವಿಮಾನ ಇದ್ದಿದ್ದರೆ ಇವತ್ತು ಇಷ್ಟೋಂದು ಸಮಸ್ಯೆ ಆಗ್ತಿರಲಿಲ್ಲ. ಸದ್ಯ ನಾವು ಬಾಡಿಗೆ ತೆಗೆದುಕೊಳ್ಳುವ ದುಸ್ಥಿತಿ ಬಂದಿದೆ. ಮೋದಿ ದೇಶವನ್ನ ಮಾರಟ ಮಾಡ್ತಿದ್ದಾರೆ. ಇನ್ನಾದರೂ ಮೋದಿ ಅವರಿಗೆ ದೇವರು ಸದ್ಭುದ್ಧಿ ಕೊಡಲಿ. ಉಳಿದಿರುವ ಎರಡು ವರ್ಷಗಳ ಅವಧಿಯಲ್ಲಿ ದೇಶವನ್ನು ಆರ್ಥಿಕತೆಗೆ ತೆಗೆದುಕೊಂಡು ಹೋಗಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದರು.ವಿದೇಶಕ್ಕೆ ವಿದ್ಯಾರ್ಥಿಗಳು ಹೋಗಿರುವ ವಿಚಾರಕ್ಕೆ, ಅವನ್ಯಾವನೋ ಮಂತ್ರಿ ವಿದೇಶಕ್ಕೆ ಏಕೆ ಓದಲು ಹೋಗ್ತೀರಾ ಎಂದು ಹೇಳ್ತಾನೆ. ಅವನ ಹತ್ರ ಹಣವಿದೆ ಕೊಡ್ತಾನೆ. ನಮ್ಮ ಹತ್ತಿರ ಹಣವಿಲ್ಲ, ನಾವೇಲ್ಲಿ ಅಷ್ಟೊಂದು ಹಣವನ್ನು ಕೋಡೋಣ. ನನ್ನ ಮಗಳು ದುಬೈನಲ್ಲಿ ಓದುತಿದ್ದಾಳೆ. ನನಗೆ ಇಲ್ಲಿ ಎರಡೆರಡು ಕೋಟಿ ಕೊಡಲು ಸಾಧ್ಯವಿಲ್ಲ. ದುಬೈನಲ್ಲಿ ಕಡಿಮೆ ರೇಟ್‍ನಲ್ಲಿ ಸೀಟ್ ಸಿಕ್ಕಿದ್ದು, ಓದಲು ಹೋಗಿದ್ದಾಳೆ. ಅಲ್ಲಿಯೂ ಓದಲು ಹೋಗಬೇಡ ಅಂದ್ರೆ ಹೇಗೆ ನಮ್ಮ ದೇಶದಲ್ಲಿ ಕಡಿಮೆ ದರ ಮಾಡಲಿ ಎಂದು ಸವಾಲು ಹಾಕಿದರು. ಇದನ್ನೂ ಓದಿ: ಅಪ್ಪು ಜೊತೆಗಿನ ಸುಮಧುರ ಕ್ಷಣಗಳನ್ನು ಬಿಚ್ಚಿಟ್ಟ ಜನಾರ್ದನ ರೆಡ್ಡಿ ಪುತ್ರ!ಪ್ರಮೋದ್ ಮುತಾಲಿಕ್ ಜೀವನದಲ್ಲಿ ಮೊದಲ ಬಾರಿಗೆ ಒಂದೊಳ್ಳೆ ಮಾತನ್ನ ಆಡಿದ್ದಾರೆ. ಕಾಲೇಜನವರು ದುಡ್ಡು ಹೊಡೆಯುತ್ತಿದ್ದಾರೆ ಅಂತಾ ಹೇಳಿದ್ದಾರೆ. ಅವರ ಹೇಳಿಕೆಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದರು.Sign in to your account
Username or Email Address


Password

 Remember Me


