ಕೋಲಾರ: ಆನಂದ ಮಾರ್ಗದ ಆಚಾರ್ಯ ಚಿನ್ಮಯಾನಂದ ಸ್ವಾಮೀಜಿ ಹತ್ಯೆ (Ananda Marga Swamiji Case) ಹಿನ್ನೆಲೆ ಆಶ್ರಮದ ಇಬ್ಬರು ಸ್ವಾಮೀಜಿಗಳು ಸೇರಿದಂತೆ ಮೂವರನ್ನು ಮಾಲೂರು ಪೊಲೀಸರು ಬಂಧಿಸಿದ್ದಾರೆ.ಕೋಲಾರ ಜಿಲ್ಲೆಯ ಮಾಲೂರು (Malur) ತಾಲ್ಲೂಕಿನ ಮೈಲಾಂಡಹಳ್ಳಿ ಬಳಿಯ ಆನಂದ ಮಾರ್ಗ ಆಶ್ರಮದ ಆಚಾರ್ಯ ಚಿನ್ಮಯಾನಂದ ಸ್ವಾಮೀಜಿ (70) ಅವರನ್ನು ಶನಿವಾರ ಆಶ್ರಮದಲ್ಲಿಯೇ (Ananda Marga Mutt) ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಇದೇ ಆಶ್ರಮದ ಇಬ್ಬರು ಸ್ವಾಮೀಜಿಗಳು ಮತ್ತು ಮಾಜಿ ಸಿಬ್ಬಂದಿ ಸೇರಿದಂತೆ ಮೂವರನ್ನು ಕೊಲೆ ಆರೋಪದ ಮೇಲೆ ಬಂಧಿಸಲಾಗಿದೆ. ಇದನ್ನೂ ಓದಿ: ಶತ್ರುಘ್ನ ಸಿನ್ಹಾ ಮಗಳು ಇಸ್ಲಾಂಗೆ ಮತಾಂತರ ಆಗ್ತಾರಾ?- ಕೊನೆಗೂ ಸಿಕ್ತು ಉತ್ತರಕೊಲೆ ಆರೋಪಿಗಳಾದ ಆಶ್ರಮದ ಆಚಾರ್ಯ ಧರ್ಮ ಪ್ರಾಣಾನಂದ ಸ್ವಾಮೀಜಿ (45), ಪ್ರಾಣೇಶ್ವರಾನಂದ ಸ್ವಾಮೀಜಿ (48) ಹಾಗೂ ಆಶ್ರಮದ ಮಾಜಿ ಸಿಬ್ಬಂದಿ ಅರುಣ್ ಕುಮಾರ್ (55) ಬಂಧಿತ ಆರೋಪಿಗಳಾಗಿದ್ದು, ಇನ್ನುಳಿದ ಆರೋಪಿಗಳ ಪತ್ತೆಗೆ ತಂಡ ರಚಿಸಲಾಗಿದೆ. ಇದನ್ನೂ ಓದಿ: ಪ್ರೀತಿಗೆ ಕುಟುಂಬದಿಂದ ವಿರೋಧ; ವಿವಾಹಿತ ಪುರುಷನೊಂದಿಗೆ ವಿದ್ಯಾರ್ಥಿನಿ ಆತ್ಮಹತ್ಯೆ!ಆಚಾರ್ಯ ಚಿನ್ಮಯಾನಂದ ಸ್ವಾಮೀಜಿ ಹಾಗೂ ಧರ್ಮ ಪ್ರಾಣಾನಂದ ಸ್ವಾಮೀಜಿ, ಅರುಣ್ ಕುಮಾರ್, ಆಡಳಿತ ಮತ್ತು ಜಮೀನು ವಿಚಾರವಾಗಿ ಆಶ್ರಮದ ಎರಡು ಗುಂಪುಗಳ ನಡುವೆ ಅನೇಕ ವರ್ಷಗಳಿಂದ ಮುಸುಕಿನ ಗುದ್ದಾಟ ನಡೆಯುತಿತ್ತು. ಅದರಂತೆ ಶನಿವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಶೌಚಾಲಯಕ್ಕೆ ತೆರಳಿದ್ದ ಸ್ವಾಮೀಜಿ ಅವರನ್ನ ಆರೋಪಿಗಳು ಹೊರಗೆ ಎಳೆದು ತಂದಿದ್ದಾರೆ. ಬಳಿಕ ಮುಖಕ್ಕೆ ಸ್ಪ್ರೆ ಸಿಂಪಡಿಸಿದ್ದಾರೆ. ಬಳಿಕ ದೊಣ್ಣೆಯಿಂದ ಭೀಕರವಾಗಿ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ.ಆಸ್ತಿ, ಅಧಿಕಾರಕ್ಕಾಗಿ ಸ್ವಾಮೀಜಿಯನ್ನು ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ. ಕೋಲಾರದ ತಾಲ್ಲೂಕು ಕಿತ್ತಂಡೂರು ಗ್ರಾಮದ ಆನಂದ ಮಾರ್ಗ ಆಶ್ರಮದಲ್ಲಿಂದು ಆಚಾರ್ಯ ಚಿನ್ಮಯಾನಂದ ಸ್ವಾಮೀಜಿ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ಅಪಾರ ಸಂಖ್ಯೆಯ ಬಂಧು-ಬಳಗ ಹಾಗೂ ಶಿಷ್ಯ ವೃಂದದ ಸಮ್ಮುಖದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.ಪ್ರಕರಣದ ಮುಖ್ಯಾಂಶ:Sign in to your account
Username or Email Address


Password

 Remember Me


