ಉಕ್ರೇನ್‌ನ ಖಾರ್ಕೀವ್ ನೆಲದಲ್ಲಿ ನಡೆದ ಶೆಲ್ ದಾಳಿಯ ವೇಳೆ ಕರ್ನಾಟಕದ ಹಾವೇರಿ ಮೂಲದ ವೈದ್ಯಕೀಯ ವಿದ್ಯಾರ್ಥಿಯಾಗಿರುವ ನವೀನ್ ನಿಧನಕ್ಕೆ ಸ್ಯಾಂಡಲ್ ವುಡ್ ಕಂಬನಿ ಮಿಡಿದಿದೆ. ಈ ಕುರಿತು ನಟಿ, ಮಾಜಿ ಸಂಸದೆ ರಮ್ಯಾ ಟ್ವೀಟ್ ಮಾಡಿ, ಸಂತಾಪ ಸೂಚಿಸಿದ್ದಾರೆ. ನಿಮ್ಮನ್ನು ಕಳೆದುಕೊಂಡಿರುವ ತಂದೆ ತಾಯಿಗೆ ನೋವು ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುವೆ ಎಂದು ಅವರು ಬರೆದುಕೊಂಡಿದ್ದಾರೆ. ಇದನ್ನೂ ಓದಿ : ಅದ್ಧೂರಿ ಸಮಾರಂಭದಲ್ಲಿ ಜನಾರ್ದನ ರೆಡ್ಡಿ ಪುತ್ರ ಕಿರೀಟಿ ಹೀರೋ ಆಗಿ ಲಾಂಚ್ನಟ ನೀನಾಸಂ ಸತೀಶ್ ಕೂಡ ನವೀನ್ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಎದೆಯುದ್ದ ಬೆಳೆದ ಮಕ್ಕಳನ್ನು ತಂದೆ ತಾಯಿಗಳು ಕಳೆದುಕೊಂಡಾಗಿನ ದುಃಖ ಯಾರಿಗೂ ಬರಬಾರದು. ನವೀನ್ ವೈದ್ಯನಾಗಿ ಅದೆಷ್ಟೋ ಜೀವ ಉಳಿಸುತ್ತಿದ್ದ, ಇದೀಗ ಯುದ್ಧದಾಹಿಗಳ ದಾಹಕ್ಕೆ ಬಲಿಯಾಗಿದ್ದಾರೆ. ಅವರ ಕುಟುಂಬಕ್ಕೆ ನೋವು ತಡೆದುಕೊಳ್ಳುವ ಶಕ್ತಿ ಬರಲಿ ಎಂದಿದ್ದಾರೆ.  ಇದನ್ನೂ ಓದಿ : ದುನಿಯಾ ವಿಜಯ್ ಹೊಸ ಚಿತ್ರಕ್ಕೆ ಟೈಟಲ್ ಫಿಕ್ಸ್ನಟ, ನಿರ್ಮಾಪಕ ಮತ್ತು ಕೃಷಿ ಮಂತ್ರಿಯೂ ಆಗಿರುವ ಬಿ.ಸಿ.ಪಾಟೀಲ್ ಕೂಡ  ಮೃತ ನವೀನ್ ಗಾಗಿ ಕಂಬನಿ ಮಿಡಿದಿದ್ದಾರೆ. “ನವೀನ್ ಜ್ಞಾನಗೌಡರ್ ಮೃತಪಟ್ಟ ಸುದ್ದಿ ಅತೀವ ದುಃಖ ತಂದಿದೆ. ಅವರು ಕುಟುಂಬಕ್ಕೆ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ದೇವರು ದಯಪಾಲಿಸಲಿ” ಎಂದು ಟ್ವಿಟ್ ಮಾಡಿದ್ದಾರೆ. ಸ್ಯಾಂಡಲ್ ವುಡ್ ನ ಸಾಕಷ್ಟು ನಿರ್ದೇಶಕರು, ನಟರು ಮತ್ತು ತಂತ್ರಜ್ಞರು ಕೂಡ ಕನ್ನಡಿಗ ಸಾವಿಗೆ ಕಂಬನಿ ಮಿಡಿದಿದ್ದಾರೆ.Sign in to your account
Username or Email Address


Password

 Remember Me


