ಹುಬ್ಬಳ್ಳಿ: 500 ವರ್ಷಗಳ ಹಿಂದೆಯೇ ಬೆಳವಡಿ ಸಾಮ್ರಾಜ್ಯದಲ್ಲಿ 2 ಸಾವಿರ ಮಹಿಳೆಯರ ಸ್ತ್ರೀ ಸೈನ್ಯ ಕಟ್ಟಿದ್ದ ಬೆಳವಡಿ ಮಲ್ಲಮ್ಮಾಜಿ ಹೆಸರನ್ನು ರಾಷ್ಟ್ರೀಯ ಮಹಿಳಾ ಸೈನ್ಯಕ್ಕೆ ಇಡಬೇಕು ಎಂದು ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠ ಹರಿಹರದ ಪೀಠಾಧ್ಯಕ್ಷ ಜಗದ್ಗುರು ಶ್ರೀ ಶ್ರೀ ಶ್ರೀ ವಚನಾನಂದ ಮಹಾಸ್ವಾಮೀಜಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.ಸೋಮವಾರ ನಡೆದ ವೀರಮಾತೆ ಬೆಳವಡಿ ರಾಣಿ ಮಲ್ಲಮ್ಮಾಜಿ 374ನೇ ವಿಜಯೋತ್ಸವ ದಿನದ ಹಿನ್ನಲೆಯಲ್ಲಿ ಹುಬ್ಬಳ್ಳಿಯಲ್ಲಿ ಬೆಳವಡಿ ಮಲ್ಲಮ್ಮನ ಭಾವಚಿತ್ರಕ್ಕೆ ಗೌರವಾರ್ಪಣೆಯನ್ನು ಸಲ್ಲಿಸಿ, ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳೊಂದಿಗೆ ಈ ಬಗ್ಗೆ ಚರ್ಚಿಸಲಾಯಿತು.ಬೆಳವಡಿ ಮಲ್ಲಮ್ಮ ದೇಶದಲ್ಲಿ ಮೊದಲ ಮಹಿಳಾ ಸೈನ್ಯವನ್ನು ರಚಿಸಿ ಅದರ ಮುಂದಾಳತ್ವವನ್ನು ವಹಿಸಿದ್ದರು. ಹಲವಾರು ಯುದ್ಧಗಳಲ್ಲಿ ಈ ವೀರಾಗ್ರಣೀಯರ ಸೈನ್ಯವನ್ನು ಮುನ್ನಡೆಸಿದ ಕೀರ್ತಿ ಮಲ್ಲಮ್ಮಾಜಿ ಅವರದ್ದು. ಇಂತಹ ವೀರಾಗ್ರಣೀ ಮಹಿಳೆಯ ಹೆಸರನ್ನು ನಮ್ಮ ರಾಷ್ಟ್ರೀಯ ಮಹಿಳಾ ಸೈನ್ಯಕ್ಕೆ ಇಡುವುದು ಸೂಕ್ತ. ಇದರಿಂದಾಗಿ ನಮ್ಮ ದೇಶದ ಇತಿಹಾಸದಲ್ಲಿ ರೋಚಕ ಅಧ್ಯಾಯಗಳನ್ನು ಬರೆದಂತಹ ಮಹಿಳೆಗೆ ಇನ್ನಷ್ಟು ಮಹತ್ವ ನೀಡಿದಂತಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಪಠ್ಯ ಪುಸ್ತಕದಲ್ಲಿ ಕೆಳದಿ ರಾಣಿ ಚೆನ್ನಮ್ಮನ ಹೋರಾಟದ ಕತೆ ಅಳವಡಿಸಲು ಚಿಂತನೆ: ಬೊಮ್ಮಾಯಿಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುವ ಉದ್ದೇಶದಿಂದ ಮುಖ್ಯಮಂತ್ರಿಗಳಿಗೆ ಮನವಿ ಪತ್ರವನ್ನು ನೀಡಲಾಗಿದೆ. ಶೀಘ್ರದಲ್ಲೇ ದೆಹಲಿಗೆ ತೆರಳಿ ರಕ್ಷಣಾ ಸಚಿವರಿಗೆ ಮನವಿ ಸಲ್ಲಿಸುವುದಾಗಿ ವಚನಾನಂದ ಶ್ರೀಗಳು ತಿಳಿಸಿದರು.ಇದೇ ವೇಳೆ ಬೆಳವಡಿ ರಾಣಿ ಮಲ್ಲಮ್ಮಾಜಿಯ ಪ್ರಾಧಿಕಾರ ರಚಿಸಬೇಕು. ಮಲ್ಲಮ್ಮಾಜಿಯ ಕುರುಹುಗಳು ರಾಕ್ ಗಾರ್ಡನ್, ರಾಣಿ ಮಲ್ಲಮ್ಮಾಜಿಯ ಸ್ಮಾರಕ ಭವನ ನಿರ್ಮಾಣ ಹಾಗೂ ರಾಣಿ ಮಲ್ಲಮ್ಮಾಜಿ ಹೆಸರಿನಲ್ಲಿ ಒಂದು ಸೈನಿಕ ಶಾಲೆಯನ್ನು ರಚಿಸಬೇಕು ಎಂಬ ಮನವಿ ಸಲ್ಲಿಸಿರುವುದಾಗಿ ತಿಳಿಸಿದರು. ಇದನ್ನೂ ಓದಿ: ಬಂಕರ್‌ಗಳಲ್ಲಿ ಭಾರತೀಯ ವಿದ್ಯಾರ್ಥಿಗಳನ್ನು ಒದ್ದು ಅಪಾರ್ಟ್ಮೆಂಟ್‌ಗೆ ಕಳುಹಿಸುತ್ತಿದ್ದಾರೆ: ವಿದ್ಯಾರ್ಥಿಕಾರ್ಯಕ್ರಮದಲ್ಲಿ ಸಚಿವ ಸಿಸಿ ಪಾಟೀಲ್, ಮಾಜಿ ವಿಧಾನ ಪರಿಷತ್ ಸದಸ್ಯ ಮೋಹನ್ ಲಿಂಬಿಕಾಯಿ, ಸೋಮನಗೌಡ ಪಾಟೀಲ್, ಚಂದ್ರಶೇಖರ ಪೂಜಾರ, ಮಲ್ಲಿಕಾರ್ಜುನ ಅಗಡಿ ಮುಂತಾದವರು ಉಪಸ್ಥಿತರಿದ್ದರು.Sign in to your account
Username or Email Address


Password

 Remember Me


