ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷ ಮನೆಗೆ 10ಕ್ಕೂ ಹೆಚ್ಚು ಮಂದಿ ಮಠಾಧೀಶರು ಇಂದು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.ಮುರುಘಾಮಠದ ಡಾ. ಶಿವಮೂರ್ತಿ ಮುರುಘ ಶರಣ ಶ್ರೀಗಳ ನೇತೃತ್ವದಲ್ಲಿ ಮಠಾಧೀಶರು ಹರ್ಷ ಮನೆಗೆ ಭೇಟಿ ಕೊಟ್ಟಿದ್ದಾರೆ. ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಭಗೀರಥ ಗುರುಪೀಠದ ಡಾ.ಪುರುಷೋತ್ತಮಾನಂದ ಪುರಿ ಸ್ವಾಮೀಜಿ, ಶಿವಶರಣ ಮಾದಾರ ಚೆನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ಕುಂಚಿಟಿಗ ಗುರುಪೀಠದ ಡಾ.ಶಾಂತವೀರ ಸ್ವಾಮೀಜಿ, ಕನಕ ಗುರುಪೀಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಮಡಿವಾಳ ಗುರುಪೀಠದ ಡಾ.ಬಸವ ಮಾಚಿದೇವ ಸ್ವಾಮೀಜಿ, ಅಂಬಿಗರ ಗುರುಪೀಠದ ಶ್ರೀ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ, ಹಡಪದ ಗುರುಪೀಠದ ಶ್ರೀ ಅನ್ನದಾನಿ ಭಾರತೀ ಅಪ್ಪಣ್ಣ ಸ್ವಾಮೀಜಿ, ಶಿವಮೊಗ್ಗ ಬಸವಕೇಂದ್ರದ ಡಾ ಬಸವ ಮರುಳಸಿದ್ಧ ಸ್ವಾಮೀಜಿ, ಶಿಕಾರಿಪುರ ವಿರಕ್ತಮಠದ ಶ್ರೀ ಚನ್ನಬಸವ ಸ್ವಾಮೀಜಿ, ದಾವಣಗೆರೆ ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ, ಕೊರಟಗೆರೆಯ ಶ್ರೀ ಮಹಾಲಿಂಗ ಸ್ವಾಮೀಜಿಗಳು ಶಿವಮೊಗ್ಗ ನಗರದ ಸೀಗೇಹಟ್ಟಿಯಲ್ಲಿರುವ ಹರ್ಷ ನಿವಾಸಕ್ಕೆ ಭೇಟಿ ನೀಡಿದ್ದಾರೆ.ಹರ್ಷ ಮನೆ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಶಿವಮೂರ್ತಿ ಮುರುಘಾ ಶರಣ ಶ್ರೀಗಳು, ಸಂತರ ನಡೆ ಸಾಂತ್ವಾನದ ಕಡೆ, ಹಾಗಾಗಿ ಎಲ್ಲಾ ಬಂದಿದ್ದೇವೆ. ಹರ್ಷ ತುಂಬಾ ಉತ್ಸಾಯಿ ಯುವಕನಾಗಿದ್ದ. ಸಂಘರ್ಷ ನಡೆಯಬೇಕು, ಆದರೆ ಹಿಂಸಾತ್ಮಕ ಸಂಘರ್ಷ ನಡೆಯಬಾರದು. ಹಿಂಸಾತ್ಮಕ ಸಂಘರ್ಷಕ್ಕೆ ಅವರನ್ನ ಕಳೆದುಕೊಂಡಿದ್ದೇವೆ. ಹರ್ಷ ಆಂತರಂಗ, ಬಹಿರಂಗದಲ್ಲಿ ರಾಷ್ಟ್ರ ಪ್ರೇಮ ಹೊಂದಿದ್ದ. ಅವರ ಹೆತ್ತವರು, ಸಹೋದರಿಯರಿಗೆ ಧೈರ್ಯ ತುಂಬಿ ಆಶೀರ್ವಾದ ಮಾಡಿದ್ದೇವೆ ಎಂದರು.  ಇದನ್ನೂ ಓದಿ: ರಷ್ಯಾ ವಿರುದ್ಧದ UNSC ನಿರ್ಣಯದಿಂದ ದೂರ ಉಳಿದ ಭಾರತ – ಧನ್ಯವಾದ ತಿಳಿಸಿದ ರಷ್ಯಾಆರ್ಥಿಕ ಆಶೀರ್ವಾದವನ್ನೂ ಮಾಡಿದ್ದೇವೆ. ಸಮಕಾಲಿನ ಸಂತರ ನಡೆ ಶಾಂತಿ, ಸಾಮಾಜಿಕ ಸಂತ್ವಾನದ ಕಡೆ, ಹಾಗಾಗಿ 12ಕ್ಕೂ ಹೆಚ್ಚು ಶ್ರೀಗಳು ಬಂದಿದ್ದೇವೆ. ಇದು ನಮ್ಮ ಆದ್ಯ ಕರ್ತವ್ಯ ಕೂಡ. ಸಾರ್ವಜನಿಕರಲ್ಲಿ ಶಾಂತಿ-ಸಾಮಾರಸ್ಯ ಬಹಳ ಮುಖ್ಯ. ಎಲ್ಲಾ ಜಾತಿ-ಧರ್ಮದಲ್ಲೂ ಆಂತರಿಕ-ಸಾಮಾಜಿಕ ಶಾಂತಿ ನೆಲೆಸಲಿ ಎಂದು ಸ್ವಾಮೀಜಿ ತಿಳಿಸಿದರು. ಇದನ್ನೂ ಓದಿ: ರಷ್ಯಾದ ಇಬ್ಬರು ಸೈನಿಕರನ್ನು ಸೆರೆ ಹಿಡಿದ ಉಕ್ರೇನ್‌ ಸೇನೆSign in to your account
Username or Email Address


Password

 Remember Me


