ಬೆಂಗಳೂರು: ಶಾಲಾ, ಕಾಲೇಜುಗಳಲ್ಲಿ ಯಾವುದೇ ಕಾಂಟ್ರವರ್ಸಿ ಬೇಡ. ಶಾಲೆಗಳು ಮಾಡಿರುವ ಕ್ರಮವನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸಲಹೆ ನೀಡಿದರು.ಆನೇಕಲ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಂದು ಶಾಲಾ ಕಾಲೇಜುಗಳು, ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಯನ್ನು ಹೊಂದಬೇಕು. ಪರಿಸರ ಕಾಳಜಿ, ರೇಡಿಯೋ, ಹವಮಾನ ಸೇರಿದಂತೆ ಹಲವು ವಿಚಾರವನ್ನು ಒಳಪಡಿಸಬೇಕು. ಇಡೀ ದೇಶದ ಶೈಕ್ಷಣಿಕ ಸಂಸ್ಥೆಗಳನ್ನು ಅಳವಡಿಸಬೇಕು. ಅಲ್ಲದೇ ನಮ್ಮ ಧರ್ಮದ ಬಗ್ಗೆ ತಿಳಿಸಬೇಕು ಎಂದರು.ಆದರೆ ಇತ್ತೀಚೆಗೆ ಕರ್ನಾಟಕದಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಒಳ್ಳೆಯದಲ್ಲ. ನಾವೆಲ್ಲಾ ಭಾರತೀಯರು. ಶಾಲೆಯಲ್ಲಿ ಯಾವುದೇ ಜಾತಿ ಮತ ಭಾಷೆ ಇಲ್ಲ, ಭಾರತೀಯತೆ ನಮ್ಮದಾಗಬೇಕು ಎಂದು ಕಿವಿಮಾತು ಹೇಳಿದರು. ನಿನ್ನೆ ಮದುವೆಯಾಗಿ ಇಂದು ದೇಶ ಸೇವೆಗೆ ಗನ್‌ ಹಿಡಿದ ದಂಪತಿನಮ್ಮ ಮಾತೃಭಾಷೆಯನ್ನು ಮರೆಯಬಾರದು. ಇರುವೆಗಳಿಗೆ ಸಕ್ಕರೆ ಹಾಕಿ, ಹಾವಿಗೆ ಹಾಲೆರದು, ಪಶುಗಳಿಗೆ ಮೇವು ಹಾಕಿ, ತಿಲಕವಿಟ್ಟು ಗೌರವಿಸುವ ಸಂಸ್ಕಾರ ನಮ್ಮದು. ಎಲ್ಲಾ ಭಾಷೆಯನ್ನು ಕಲಿಯಬೇಕು. ಆದರೆ ಮೊದಲು ನಿಮ್ಮ ಮಾತೃ ಭಾಷೆ ಕಲೀರಿ. ಮೊದಲು ಕನ್ನಡ ಕಲೀರಿ. ಮಾತೃಭಾಷೆ ಎನ್ನುವುದು ಕಣ್ಣು ಇದ್ದಂತೆ. ಇತರ ಭಾಷೆ ಕನ್ನಡಕ ಇದ್ದಂತೆ, ಕಣ್ಣೇ ಇಲ್ಲದಿದ್ದರೇ ರಿಬಾನ್ ಗ್ಲಾಸ್ ಹಾಕಿದ್ರೂ ಏನ್ ಪ್ರಯೋಜನ ಎಂದು ತಿಳಿಸಿದರು. ಹರಿದ್ವಾರದಿಂದ ತಂದ ಪವಿತ್ರ ಗಂಗಾಜಲ 2 ಸಾವಿರ ಶಿವ ದೇವಾಲಯಗಳಿಗೆ ವಿತರಣೆSign in to your account
Username or Email Address


Password

 Remember Me


