ಬೆಳಗಾವಿ: ಸ್ವಪಕ್ಷೀಯರ ವಿರೋಧದ ನಡುವೆಯೂ ಆಪ್ತನನ್ನು ಬಿಜೆಪಿಗೆ ಕರೆತರುವಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಯಶಸ್ವಿಯಾಗಿದ್ದಾರೆ.ನಗರದ ಖಾನಾಪೂರ ಕ್ಷೇತ್ರದ ಎಂಇಎಸ್‍ನ ಮಾಜಿ ಶಾಸಕ ಅರವಿಂದ ಪಾಟೀಲ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇದನ್ನೂ ಓದಿ: ಹರ್ಷನ ಹತ್ಯೆ- ಡೀಟೈಲ್ಸ್ ಎಲ್ಲ ಹೇಳೋಕೆ ಆಗಲ್ಲ: ಆರಗ ಜ್ಞಾನೇಂದ್ರಅರವಿಂದ ಅವರ ಬಿಜೆಪಿ ಸೇರ್ಪಡೆಯಿಂದಾಗಿ ಬೆಳಗಾವಿ ಜಿಲ್ಲಾ ರಾಜಕೀಯದಲ್ಲಿ ತರಹೇವಾರು ಚರ್ಚೆಯಾಗುತ್ತಿದೆ. ಸ್ವಪಕ್ಷೀಯರ ವಿರೋಧದ ಮಧ್ಯೆ ಆಪ್ತನನ್ನು ಪಕ್ಷಕ್ಕೆ ಕರೆತರುವಲ್ಲಿ ಸವದಿ ಅವರು ಯಶಸ್ವಿಯಾಗಿದ್ದಾರೆ. ಆದರೆ ಅರವಿಂದ ಪಾಟೀಲ್ ಬಿಜೆಪಿ ಪಕ್ಷ ಸೇರ್ಪಡೆಯಿಂದ ಖಾನಾಪೂರ ಕ್ಷೇತ್ರದ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ. ಇದನ್ನೂ ಓದಿ: ಹರ್ಷ ಕೊಲೆ ಕೇಸ್ ತನಿಖೆ ಪೂರ್ಣಗೊಳಿಸಿ ಆರೋಪಿಗಳನ್ನು ಎನ್‍ಕೌಂಟರ್ ಮಾಡಿ: ಮುತಾಲಿಕ್ಖಾನಾಪೂರ ಕ್ಷೇತ್ರದ ಬಿಜೆಪಿ ಟಿಕೆಟ್‍ಗಾಗಿ ಕಸರತ್ತು ನಡೆಸಿದ್ದ ವಿಠ್ಠಲ ಹಲಗೇಕರ್, ಡಾ.ಸೋನಾಲಿ ಸರ್ನೋಬತ್ ಸೇರಿದಂತೆ ಹಲವು ಮುಖಂಡರು ಸವದಿ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭಿನ್ನಮತ ಶಮನ ವಿಚಾರವಾಗಿ ಮಧ್ಯಪ್ರವೇಶಿಸಿದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ತೆಂಗಿನಕಾಯಿ ಖಾನಾಪೂರ ಬಿಜೆಪಿ ನಾಯಕರ ಜೊತೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದಾರೆ. ಹಾಗೆಯೇ ಯಾರೂ ಮಾಧ್ಯಮಗಳಿಗೆ ಹೇಳಿಕೆ ನೀಡಿದಂತೆ ಖಾನಾಪೂರ ಅವರು ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.Sign in to your account
Username or Email Address


Password

 Remember Me


