ತೀವ್ರ ಹೃದಯಾಘಾತದಿಂದ ನಿಧನರಾದ ಆರ್.ಜೆ ರಚನಾ (39) ಅವರ ಅಂಗಾಂಗಗಳನ್ನು ದಾನ ಮಾಡಲು ಅವರ ಕುಟುಂಬ ನಿರ್ಧರಿಸಿದೆ. ಈ ಮೂಲಕ ಸಾವಿನಲ್ಲೂ ರಚನಾ ಕುಟುಂಬ ಸಾರ್ಥಕತೆ ಮೆರೆದಿದೆ. ಬೆಳಗ್ಗೆ ರಚನಾ ಅವರಿಗೆ ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ. ಇದನ್ನೂ ಓದಿ : ಕಂಚಿನ ಕಂಠದ ಆರ್.ಜೆ ರಚನಾ ಹೃದಯಾಘಾತದಿಂದ ನಿಧನರೇಡಿಯೋ ಮಿರ್ಚಿ, ರೇಡಿಯೋ ಸಿಟಿ ಸೇರಿದಂತೆ ಹಲವು ರೇಡಿಯೋ ವಾಹಿನಿಗಳಲ್ಲಿ ಕೆಲಸ ಮಾಡಿದ್ದ ಅವರು, ತಮ್ಮದೇ ವಿಶೇಷ ಶೈಲಿಯ ಮಾತಿನಿಂದ ಅಪಾರ ಕೇಳುಗರನ್ನು ಪಡೆದಿದ್ದರು. ಹಾಗಾಗಿ ರಚನಾ ಕಾರ್ಯಕ್ರಮಗಳನ್ನು ಕೇಳಲು ಕೇಳುಗರ ವರ್ಗವೇ ಸೃಷ್ಟಿಯಾಗಿತ್ತು. ಅದರಲ್ಲೂ ಸ್ಯಾಂಡಲ್ ವುಡ್ ನ ಅನೇಕ ಸ್ಟಾರ್ ನಟರು ರಚನಾ ಕಾರ್ಯಕ್ರಮದಲ್ಲಿ ಭಾಗಿಯಾಗಲು ತುದಿಗಾಲಲ್ಲಿ ನಿಲ್ಲುತ್ತಿದ್ದರು. ಇದನ್ನೂ ಓದಿ : ವೇದಿಕಾಗೆ ಸಿಕ್ತು ಬಂಪರ್ ಆಫರ್ಕಳೆದ ಕೆಲ ವರ್ಷಗಳಿಂದ ರಚನಾ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗುತ್ತಿದೆ. ಅಲ್ಲದೇ ಹೆಚ್ಚು ಜನರ ಜತೆ ಬೆರೆಯುತ್ತಿರಲಿಲ್ಲ ಎನ್ನುತ್ತಾರೆ ಅವರ ಸ್ನೇಹಿತರು. ಅತೀ ಚಿಕ್ಕ ವಯಸ್ಸಿನಲ್ಲೇ ಅವರು ಕಾರ್ಡಿಯಾ ಕರೆಸ್ಟ್‍ನಿಂದಾಗಿ ನಿಧನರಾಗಿದ್ದಾರೆ. ಇದನ್ನೂ ಓದಿ : ಮೊಗ್ಗಿನ ಮನಸು ಚಿತ್ರಕ್ಕೂ ಲವ್ 360 ಸಿನಿಮಾಗೂ ಇರೋ ಸಂಬಂಧ ಏನು?ಡಯೆಟ್, ಸದಾ ಹಸನ್ಮುಖಿಯಾಗಿಯೇ ಇರುತ್ತಿದ್ದ ಮತ್ತು ಆರೋಗ್ಯದ ಬಗ್ಗೆ ಸಾಕಷ್ಟು ಕಾಳಜಿ ತಗೆದುಕೊಳ್ಳುತ್ತಿದ್ದ ರಚನಾ ಸಾವು ಅವರ ಸ್ನೇಹಿತರ ಬಳಗಕ್ಕೆ ತೀವ್ರ ಆಘಾತ ಮೂಡಿಸಿದೆ.Sign in to your account
Username or Email Address


Password

 Remember Me


