ವಿಜಯನಗರ: ವಿದ್ಯಾರ್ಥಿಯೊಬ್ಬ ಮನೆಯಲ್ಲಿ ಮೊಬೈಲ್ ಕೊಡಿಸಲಿಲ್ಲವೆಂದು ತೆಲೆ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಟ್ಟೂರು ತಾಲೂಕಿನ ತೂಲಹಳ್ಳಿ ಗ್ರಾಮದಲ್ಲಿ ನಡೆದಿದೆ.ಪ್ರಥಮ ಪಿಯುಸಿ ಓದುತ್ತಿದ್ದ ನಾಗರಾಜ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮೊಬೈಲ್ ಕೊಡಿಸಿಲ್ಲವೆಂದು ಫೆ.16 ರಂದು ಮನೆ ಬಿಟ್ಟು ಹೋಗಿದ್ದ. ಅವನು ಸನ್ನಿಧಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ. ವಿದ್ಯಾರ್ಥಿಯ ಶವವು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಕೊಟ್ಟೂರು ಕೆರೆಯಲ್ಲಿ ಪತ್ತೆಯಾಗಿದೆ. ಇದನ್ನೂ ಓದಿ: ಉತ್ತರ ಪ್ರದೇಶಕ್ಕೆ 3ನೇ ಹಂತ, ಪಂಜಾಬ್ ಮತದಾನ ಇಂದು – ಅಖಿಲೇಶ್ ಯಾದವ್ ಭವಿಷ್ಯ ನಿರ್ಧಾರವಿದ್ಯಾರ್ಥಿಯು ಓದಿಗಾಗಿ ಮೊಬೈಲ್ ಕೊಡಿಸುವಂತೆ ಪೋಷಕರ ಬಳಿ ಹಟ ಹಿಡಿದಿದ್ದ. ಆದರೆ ಮನೆಯಲ್ಲಿ ಮೊಬೈಲ್ ಕೊಡಿಸದಿದ್ದಕ್ಕೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: ಹಿಜಬ್ ಆಯ್ಕೆಯಲ್ಲ, ನಾವು ಪ್ರೀತಿಸುವ ದೇವರು ವಿಧಿಸಿರುವ ಶಿಷ್ಟಾಚಾರ: ಝೈರಾ ವಾಸಿಮ್ಘಟನೆಯ ಕುರಿತು ವಿಜಯನಗರ ಜಿಲ್ಲೆಯ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


