ಚಿಕ್ಕಬಳ್ಳಾಪುರ: ತಾಲೂಕಿನ ಹೊಸಹುಡ್ಯ ಗ್ರಾಮದಲ್ಲಿ ಆಯೋಜಿಸಲಾಗಿದ್ದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ’ ಕಾರ್ಯಕ್ರಮಕ್ಕೆ ಕ್ಷೇತ್ರದ ಶಾಸಕರು ಹಾಗೂ ಆರೋಗ್ಯ ಹಾಗೂ ವೈದ್ಯಕೀಯ ಖಾತೆ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಎತ್ತಿನಗಾಡಿಯಲ್ಲಿ ಬರುವ ಮೂಲಕ ಗಮನಸೆಳೆದರು.‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ’ ಕಾರ್ಯಕ್ರಮಕ್ಕೆ ಆಗಮಿಸಿದ ಸಚಿವರು ಇದಕ್ಕೂ ಮುನ್ನ ತಮ್ಮನಾಯಕನಹಳ್ಳಿ ಗ್ರಾಮದಲ್ಲಿ 10 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಅಂಬೇಡ್ಕರ್ ಭವನಕ್ಕೆ ಚಾಲನೆ ನೀಡಿದರು. ತದನಂತರ ಜಾತವಾರ ಗ್ರಾಮದಲ್ಲಿ ನಿರ್ಮಾಣವಾಗಿರುವ 10 ಲಕ್ಷ ರೂ. ವೆಚ್ಚದ ಗರಡಿ ಹಾಗೂ ಸಮುದಾಯ ಭವನವನ್ನ ಲೋಕಾರ್ಪಣೆ ಮಾಡಿದರು. ಇದನ್ನೂ ಓದಿ: ದರ್ಗಾ ಕಟ್ಟಡಕ್ಕೆ ಹಾನಿಮಾಡಿದ ಆರೋಪಿಗಳು ಪೊಲೀಸರ ಬಲೆಗೆ!ತದನಂತರ ಹೊಸಹುಡ್ಯ ಗ್ರಾಮಕ್ಕೆ ಬಂದ ಸುಧಾಕರ್ ಅವರನ್ನು ಅದ್ದೂರಿಯಾಗಿ ಬರ ಮಾಡಿಕೊಂಡರು. ಸಚಿವರನ್ನು ಸೇರಿದಂತೆ ಅಧಿಕಾರಿಗಳನ್ನು ಗ್ರಾಮಸ್ಥರು ಎತ್ತಿನ ಬಂಡಿ ಮೂಲಕ ಗ್ರಾಮಕ್ಕೆ ಕರೆದೊಯ್ದರು. ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮಕ್ಕೆ ಸುಧಾಕರ್ ಅವರು ಚಾಲನೆ ನೀಡಿದರು. ಜಿಲ್ಲಾಧಿಕಾರಿಗಳು ಹಾಗೂ ಸಚಿವರು ಸಹ ಇಂದು ರಾತ್ರಿ ಗ್ರಾಮ ವಾಸ್ತವ್ಯ ಮಾಡಿ ಗ್ರಾಮಸ್ಥರ ಸಮಸ್ಯೆಗಳಿಗೆ ಪರಿಹಾರ, ಅಭಿವೃದ್ದಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.Sign in to your account
Username or Email Address


Password

 Remember Me


