ಬೆಂಗಳೂರು: ಪತ್ರಕರ್ತರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಕೈಗೊಂಡಿದೆ. ಪತ್ರಕರ್ತರ ಕಲ್ಯಾಣಕ್ಕೆ ಸರ್ಕಾರ ಬದ್ಧ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಅಭಿಪ್ರಾಯಪಟ್ಟಿದ್ದಾರೆ.ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಗಪುರದಲ್ಲಿರುವ ಶಾಸಕರ ಕಚೇರಿಯಲ್ಲಿಂದು ಪತ್ರಕರ್ತರಿಗೆ ಇ-ಶ್ರಮ ಕಾರ್ಡ್‍ಗಳನ್ನು ವಿತರಿಸಿ ಮಾತನಾಡಿದ ಅವರು, ಸಾಮಾಜಿಕ ಭದ್ರತೆ ಸೇರಿದಂತೆ ಸರ್ಕಾರದ ವಿವಿಧ ಪ್ರಯೋಜನಗಳನ್ನು ಇ-ಶ್ರಮ ಮೂಲಕ ಪಡೆಯಬಹುದಾಗಿದೆ. ರಾಜ್ಯದ ಶ್ರಮಿಕ ವರ್ಗದ ಜನರ ಅಭ್ಯುದಯಕ್ಕಾಗಿ ಸರ್ಕಾರ ಜಾರಿಗೊಳಿಸಿರುವ ಇ-ಕಾರ್ಡ್‍ನ ಪ್ರಯೋಜನವನ್ನು ಪ್ರತಿಯೊಬ್ಬ ಪತ್ರಕರ್ತರು ಪಡೆದುಕೊಳ್ಳಬೇಕೆಂದು ಸಚಿವರು ಮನವಿ ಮಾಡಿದರು. ಇದನ್ನೂ ಓದಿ: ತಾಜ್ ಮಹಲ್‌ಗೆ 3 ದಿನಗಳ ಉಚಿತ ಪ್ರವೇಶಬಳಿಕ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಜನರಿಗೆ ಲೇಬರ್ ಕಾರ್ಡ್ ವಿತರಿಸಿದರು. ಜನರಿಗೆ ಇದು ಒಂದೇ ಅಲ್ಲ ಸರ್ಕಾರದ ವಿವಿಧ ಯೋಜನೆಗಳ ಅಡಿಯಲ್ಲಿ ಸಾಕಷ್ಟು ಸೌಲಭ್ಯ ಒದಗಿಸಲಾಗಿದೆ ಅದನ್ನು ಸದುಪಯೋಗ ಪಡಿಸಿಕೊಳ್ಳಿ ಎಂದರು.ಕಾರ್ಯಕ್ರಮದಲ್ಲಿ ಬಿಬಿಎಂಪಿ ಮಾಜಿ ಉಪಮೇಯರ್ ಹೇಮಲತಾ ಕೆ.ಗೋಪಾಲಯ್ಯ, ರಾಜ್ಯ ಕಾರ್ಯನಿರತ ಪತ್ರ ಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಇತರರು ಉಪಸ್ಥಿತರಿದ್ದರು. ಇದನ್ನೂ ಓದಿ: ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯ – PSI ನೇಮಕಾತಿಗೆ ತಡೆ: ಆರಗ ಜ್ಞಾನೇಂದ್ರ






 Advertisement 




Sign in to your account
Username or Email Address


Password

 Remember Me


