ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಅನ್ವಯ ವೇತನ ಹೆಚ್ಚಳ ಮಾಡುವ ಕುರಿತು ವರದಿ ನೀಡಲು ಮುಂಬರುವ ಬಜೆಟ್‍ನಲ್ಲಿ ಒಂದು ಸಮತಿ ನೇಮಕ ಮಾಡಲಾಗುತ್ತೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ಕೊಟ್ಟರು.ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ವೇತನ ಜಾರಿಗೆ ಕ್ರಮವಹಿಸಬೇಕು. ನಮ್ಮ ರಾಜ್ಯದ ಸರ್ಕಾರಿ ನೌಕರರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ ವೇತನದಲ್ಲಿ ತಾರತಮ್ಯ ಇದೆ. ಕೂಡಲೇ 7ನೇ ವೇತನ ಆಯೋಗ ಜಾರಿ ಮಾಡಬೇಕು ಎಂದು ಜೆಡಿಎಸ್ ಸದಸ್ಯ ಶ್ರೀಕಂಠೇಗೌಡ ಒತ್ತಾಯ ಮಾಡಿದರು. 6 ನೇ ವೇತನ ಆಯೋಗ ವೇತನದಲ್ಲಿ ಇರೋ ತಾರತಮ್ಯ ಸರಿ ಮಾಡಿಬೇಕು. ರಾಜ್ಯದಲ್ಲಿ 2 ಲಕ್ಷ ಸರ್ಕಾರದಲ್ಲಿ ಹುದ್ದೆಗಳು ಖಾಲಿ ಇವೆ. ಕೂಡಲೇ ಇವುಗಳನ್ನು ಭರ್ತಿ ಮಾಡಬೇಕು ಎಂದು ಸಿಎಂಗೆ ಮನವಿ ಮಾಡಿದರು. ಇದನ್ನೂ ಓದಿ: ಪ್ರತಿದಿನ ಗುರುಗ್ರಾಮ ನಿವಾಸಿಗಳನ್ನು ಭೇಟಿ ಮಾಡ್ತಾರೆ ಮೊದಲ ಮಹಿಳಾ ಕಮಿಷನರ್!ಇದಕ್ಕೆ ಉತ್ತರ ನೀಡಿದ ಬೊಮ್ಮಾಯಿ ಅವರು, ರಾಜ್ಯ ಮತ್ತು ಕೇಂದ್ರ ನೌಕರರ ನಡುವೆ ವೇತನ ತಾರತಮ್ಯ ಇದೆ. ರಾಜ್ಯದಲ್ಲಿ 2017-18 ರಲ್ಲಿ ವೇತನ ಪರಿಷ್ಕರಣೆ ಆಗಿತ್ತು. ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಈ ಬಗ್ಗೆ ಕ್ರಮ ತಗೋತೀವಿ ಎಂದು ಭರವಸೆ ನೀಡಿದರು.ಸರ್ಕಾರಿ ನೌಕರರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಕೊರೊನಾ ಸಮಯದಲ್ಲಿ ನಮ್ಮ ಸಿಬ್ಬಂದಿಗಳು ಕೆಲಸ ಮಾಡಿದ್ದಾರೆ. ಮುಂದಿನ ಬಜೆಟ್ ನಲ್ಲಿ ಆರ್ಥಿಕ ಪರಿಸ್ಥಿತಿ ನೋಡಿಕೊಂಡು ವೇತನ ಪರಿಷ್ಕರಣೆ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ತಿಳಿಸಿದರು.2022-23ರ ಬಜೆಟ್‍ನಲ್ಲಿ ವೇತನ ಆಯೋಗ ರಚನೆ ಮಾಡೋ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ಸಿಎಂ ಘೋಷಣೆ ಮಾಡಿದರು. ರಾಜ್ಯದಲ್ಲಿ 16 ಸಾವಿರ ಪೊಲೀಸ್ ಹುದ್ದೆ, 17 ಸಾವಿರ ಶಿಕ್ಷಕರ ಹುದ್ದೆ, 14 ಸಾವಿರ ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿವಿಧ ಹುದ್ದೆ ತುಂಬಲು ಆದೇಶ ಹೊರಡಿಸಲಾಗಿದೆ. ಹಂತ-ಹಂತವಾಗಿ ಖಾಲಿ ಇರೋ ಹುದ್ದೆಗಳನ್ನ ತುಂಬುವ ಕೆಲಸ ಮಾಡುತ್ತೀವಿ ಎಂದು ವಿಶ್ವಾಸದ ಮಾತುಗಳನ್ನಾಡಿದರು. ಇದನ್ನೂ ಓದಿ: ಹಿಜಬ್ ವಿವಾದ: ಬುರ್ಕಾನೇ ಮುಖ್ಯ, ಸಿಂಧೂರ ತೆಗೆಸಿ ಎಂದ ವಿದ್ಯಾರ್ಥಿನಿಯರು!Sign in to your account
Username or Email Address


Password

 Remember Me


