ಚಿಕ್ಕೋಡಿ: ಜಲಾಶಯದ ಬಳಿ ಫೋಟೋಶೂಟ್‍ಗೆ ಹೋಗಿದ್ದ ವಿದ್ಯಾರ್ಥಿ ಈಜಲು ಹೋಗಿ ಆಯತಪ್ಪಿ ನದಿಯಲ್ಲಿ ಬಿದ್ದು, ಮುಳಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ಲ ಜಲಾಶಯದ ಬಳಿ ನಡೆದಿದೆ.ಜಿಹಾದ ಮಸೂದ್ ಶರೀಫ (20) ಮೃತ ಯುವಕ. ಹುಕ್ಕೇರಿ ತಾಲೂಕಿನ ಯಮಕನಮರಡಿ ನಿವಾಸಿಯಾಗಿದ್ದಾನೆ. ನೀಡಸೊಸಿ ಪಾಲಿಟೆಕ್ನಿಕ್ ಕಾಲೇಜ್‍ನಲ್ಲಿ ವ್ಯಾಸಂಗ ಮಾಡುತ್ತಿದ್ದನು. ಇದನ್ನೂ ಓದಿ: ಇಂದು ಸಂಜೆಯಿಂದ ಲಘು ವಾಹನಗಳ ಸಂಚಾರಕ್ಕೆ ಪೀಣ್ಯ ಫ್ಲೈಓವರ್‌ ಮುಕ್ತಇಂದು ಘಟಪ್ರಭಾ ನದಿಯ ಹಿಡಕಲ್ಲ ಜಲಾಶಯದ ಬಳಿ ಗೆಳೆಯರೊಂದಿಗೆ ಫೋಟೋಶೂಟ್ ಮಾಡಲು ಹೋಗಿದ್ದ. ಈ ವೇಳೆ ಯುವಕ ನದಿಯಲ್ಲಿ ಈಜಲು ಹೋಗಿ ನದಿಗೆ ಬಿದ್ದು ಪ್ರಾಣ ಬಿಟ್ಟಿದ್ದಾನೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:  ಸಚಿವ ಈಶ್ವರಪ್ಪ ನಿವಾಸಕ್ಕೆ ಯೂತ್ ಕಾಂಗ್ರೆಸ್ ಮುತ್ತಿಗೆಸ್ಥಳಕ್ಕೆ ಯಮಕನಮರಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನದಿಯಿಂದ ಯುವಕನ ಮೃತ ದೇಹ ಹೊರ ತೆಗೆದಿದ್ದಾರೆ. ಯುವಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮಟ್ಟಿದೆ. ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.Sign in to your account
Username or Email Address


Password

 Remember Me


