ಮಡಿಕೇರಿ: ವಯಸ್ಸಾದ ಹುಲಿಯನ್ನು ಕೊಂದು, ಅದರ ಚರ್ಮ ಮಾರಾಟ ಮಾಡಲು ಯತ್ನಿಸಿದ ನಾಲ್ವರು ಆರೋಪಿಗಳನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳನ್ನು ಹರೀಶ್, ರಮೇಶ್, ಮನು ಹಾಗೂ ರಾಜೇಶ್ ಎಂದು ಗುರುತಿಸಲಾಗಿದ್ದು, ವಯಸ್ಸಾದ ಹುಲಿ ಕೊಂದು, ಅದರ ಚರ್ಮ, ಉಗುರು ಹಾಗೂ ಪಾದಗಳನ್ನು ಕತ್ತರಿಸಿ ಮಾರಾಟ ಮಾಡಲು ಯತ್ನಿಸಿದ್ದರು. ಈ ಭಾಗದಲ್ಲಿ ಹುಲಿಗಳನ್ನು ಕೊಂದು ಅದರ ಚರ್ಮ ಹಾಗೂ ಇತರ ಭಾಗಗಳನ್ನ ಕತ್ತರಿಸಿ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ಮಾಡಿದ್ದರು. ಇದನ್ನೂ ಓದಿ: ಯುವಕರಿಗೆ ಉದ್ಯೋಗ, ಬಡವರಿಗೆ 1 ಕೆಜಿ ಉಚಿತ ತುಪ್ಪ: ಅಖಿಲೇಶ್ ಯಾದವ್ ಭರವಸೆಇದೀಗ ಬಂಧಿತರಿಂದ ಹುಲಿಯ ಚರ್ಮ, 7 ಉಗುರು, 2 ಕಾಲನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಪ್ರಕರಣ ಕುರಿತಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ. ಹೆಚ್ಚಿನ ವಿಚಾರಣೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಈಶಾನ್ಯ ಭಾರತದವರ ಜೀವನ ಶೈಲಿಯ ಮೇಲೆ ಬಿಜೆಪಿ ಹಸ್ತಕ್ಷೇಪ: ಪ್ರಿಯಾಂಕಾ ಗಾಂಧಿSign in to your account
Username or Email Address


Password

 Remember Me


