ಕೊಪ್ಪಳ: ಕರ್ನಾಟಕದಲ್ಲಿ ಹಿಜಬ್- ಕೇಸರಿ ಶಾಲು ಸಂಘರ್ಷದ ನಡುವೆ ಕೊಪ್ಪಳ ಜಿಲ್ಲೆಯ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರು ಹಿಜಬ್ ಧರಿಸಿಯೇ ಶಾಲೆಗೆ ಹಾಜರಾಗಿದ್ದಾರೆ.ನಗರದ ಮೌಲಾನಾ ಅಜಾದ್ ಮಾದರಿಯ ಶಾಲೆಯಲ್ಲಿ ನಿನ್ನೆ ಶಾಲೆಗೆ ಹಿಜಬ್ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರಿಗೆ ಶಿಕ್ಷಕರು ಬಿಚ್ಚಿಸಿ ಶಾಲೆಗೆ ಪ್ರವೇಶ ನೀಡಿದ್ದರು. ಆದರೆ ಇಂದು ಸಹ ವಿದ್ಯಾರ್ಥಿನಿಯರು ಹಿಜಬ್ ಧರಿಸಿ ಶಾಲೆಗೆ ಆಗಮಿಸಿದ್ದಾರೆ. ಇದನ್ನೂ ಓದಿ: ಸಿಎಂ ಕೆಸಿಆರ್‌ಗೆ ಸರ್ಜಿಕಲ್ ಸ್ಟ್ರೈಕ್ ವೀಡಿಯೋ ಪುರಾವೆ ನೀಡಿದ ಅಸ್ಸಾಂ ಸಿಎಂಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದ್ದರೂ ವಿದ್ಯಾರ್ಥಿನಿಯರು ಕ್ಯಾರೇ ಅನ್ನದೇ ಹಿಜಾಬ್ ಹಾಕಿಕೊಂಡೇ ಶಾಲೆಗೆ ಬಂದಿದ್ದಾರೆ. ಅಲ್ಲದೇ ಯಾವುದೇ ಕಾರಣಕ್ಕೂ ನಾವು ಹಿಜಬ್ ತೆಗೆಯುವುದಿಲ್ಲ ಎಂದು ಕೈಯಲ್ಲಿ ಸನ್ನೆ ಮಾಡುತ್ತಾ ಪಟ್ಟು ಹಿಡಿದಿದ್ದಾರೆ. ಇನ್ನೂ ಇದೇ ಕಾರಣಕ್ಕೆ ಶಾಲೆಯ ಮುಂದೆ ಜಮಾಯಿಸಿರುವ ಪಾಲಕರು ಹಿಜಬ್ ವಿವಾದ ಮುಗಿಯುವವರೆಗೂ ಶಾಲೆಗೆ ರಜೆ ಘೊಷಣೆ ಮಾಡುವಂತೆ ಆಗ್ರಹಿಸಿದ್ದಾರೆ. ಇದೀಗ ಶಾಲೆಗೆ ಕೊಪ್ಪಳ ತಹಸೀಲ್ದಾರ್ ಅಮರೇಶ ಬಿರಾದಾರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.  ಇದನ್ನೂ ಓದಿ: ರಾಹುಲ್ ಗಾಂಧಿ ಟ್ವೀಟ್ ವಿರುದ್ಧ ಒಂದು ಸಾವಿರಕ್ಕೂ ಹೆಚ್ಚು ಕೇಸ್ ದಾಖಲುSign in to your account
Username or Email Address


Password

 Remember Me


