ಬೆಂಗಳೂರು: ಸ್ಯಾಂಡಲ್‍ವುಡ್‍ನ ಹಿರಿಯ ಕಲಾವಿದೆ ಭಾರ್ಗವಿ ನಾರಾಯಣ್ ಅವರು ನಿಧನರಾಗಿದ್ದಾರೆ.ಭಾರ್ಗವಿ ನಾರಾಯಣ್ (84) ಅವರು ಸೋಮವಾರ ಸಂಜೆ 7:30ಕ್ಕೆ ಕೊನೆಯುಸಿರೆಳೆದಿದ್ದಾರೆ. ಭಾರ್ಗವಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.ಸಿನಿಮಾ, ಕಿರುತೆರೆ ಹಾಗೂ ರಂಗಭೂಮಿಯಲ್ಲಿ ಸಕ್ರಿಯರಾಗಿದ್ದ ಭಾರ್ಗವಿ ನಾರಾಯಣ್ ಅವರು ಸಹಜ ಅಭಿನಯದಿಂದ ಗುರುತಿಸಿಕೊಂಡವರು. ಅವರ ಸಾವಿನ ಕುರಿತು ಅವರ ಮೊಮ್ಮಗಳು, ನಟಿ ಸಂಯುಕ್ತಾ ಹೊರನಾಡು  ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.ಎರಡು ಕನಸು, ಹಂತಕರ ಸಂಚು, ಪಲ್ಲವಿ ಅನುಪಲ್ಲವಿ, ಬಾ ನಲ್ಲೆ ಮಧುಚಂದ್ರಕೆ, ವಂಶವೃಕ್ಷ,  ಪ್ರೋಫೆಸರ್ ಹುಚ್ಚುರಾಯ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. 2019ರಲ್ಲಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಸಂದಿದೆ. ಭಾರ್ಗವಿ ಅವರು 600ಕ್ಕೂ ಹೆಚ್ಚು ನಾಟಕಗಳ ಪ್ರದರ್ಶನ ನೀಡಿದ್ದಾರೆ.ರಂಗಭೂಮಿಯಲ್ಲಿ ಮೇಕಪ್ ನಾಣಿ ಎಂದೇ ಹೆಸರಾಗಿದ್ದ ಬೆಳವಾಡಿ ನಂಜುಡಯ್ಯ ನಾರಾಯಣ ಅವರು ಭಾರ್ಗವಿ ಅವರ ಪತಿ. ದಂಪತಿಗೆ ನಟರಾದ ಪ್ರಕಾಶ್ ಬೆಳವಾಡಿ, ಸುಧಾ ಬೆಳವಾಡಿ ಸೇರಿ ನಾಲ್ವರು ಮಕ್ಕಳಿದ್ದಾರೆ.  A post shared by Samyukta Hornad (@samyuktahornad)ಕನ್ನಡ ನಾಟಕ ಅಕಾಡೆಮಿಯ ಸದಸ್ಯರಾಗಿ ಕೆಲಸ ಮಾಡಿದ ಅವರು AIR ನ ಮಹಿಳಾ ಕಾರ್ಯಕ್ರಮಗಳು ಮತ್ತು ಮಕ್ಕಳಿಗಾಗಿ ಮಹಿಳಾ ಸಂಘ, ಕರ್ನಾಟಕಕ್ಕೆ ನಾಟಕಗಳನ್ನು ಬರೆದು ನಿರ್ದೇಶಿಸಿದ್ದಾರೆ. ಅವರು ಕನ್ನಡದಲ್ಲಿ ನಾ ಕಂಡ ನಮ್ಮವರು ಎಂಬ ಪುಸ್ತಕವನ್ನೂ ಬರೆದಿದ್ದಾರೆ. 2012 ರಲ್ಲಿ ಬಿಡುಗಡೆಯಾದ ಭಾರ್ಗವಿ ನಾರಾಯಣ್ ಅವರ ಆತ್ಮಕಥೆ, ನಾನು, ಭಾರ್ಗವಿ (ನಾನು, ಭಾರ್ಗವಿ) ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದರು.Sign in to your account
Username or Email Address


Password

 Remember Me


