ಬೆಂಗಳೂರು: ನೀಟ್ ಪರೀಕ್ಷೆ ಅಕ್ರಮ (NEET Exam Case) ಎನ್‌ಡಿಎಯ (NDA) ದೊಡ್ಡ ಹಗರಣ. ನೀಟ್ ಅಕ್ರಮ ಕುರಿತು ಸಿಬಿಐ (CBI) ತನಿಖೆ ನಡೆಸಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ (Sharanprakash Patil) ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.ನೀಟ್ ಅಕ್ರಮ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಅವರು, ನೀಟ್ ಅಕ್ರಮ ಎನ್‌ಡಿಎ ಸರ್ಕಾರದ ಹಗರಣ. ನೀಟ್ ಪರೀಕ್ಷೆ ಬಗ್ಗೆ ಯುವಕರಲ್ಲಿ ಅನುಮಾನ ಇದೆ. 24 ಲಕ್ಷ ಜನ ಪರೀಕ್ಷೆ ಬರೆದವರು ಆತಂಕದಲ್ಲಿ ಇದ್ದಾರೆ. ಸುಪ್ರೀಂ ಕೋರ್ಟ್ ಕೂಡ ಇದರಲ್ಲಿ ಕ್ರಮ ಆಗಬೇಕು ಎಂದು ಕೇಂದ್ರಕ್ಕೆ ಸೂಚನೆ ನೀಡಿದೆ. ಬುಧವಾರ ರಾತ್ರಿ ನೆಟ್ ಎಕ್ಸಾಂ (NET Exam) ಕೂಡ ಕೇಂದ್ರ ರದ್ದು ಮಾಡಿದೆ. ಇಡೀ ದೇಶದ ಯುವಕರ ಜೊತೆ ಕೇಂದ್ರ ಸರ್ಕಾರ ಚೆಲ್ಲಾಟ ಆಡುತ್ತಿದೆ. ನೀಟ್ ಪರೀಕ್ಷೆ ಕುರಿತು ಸಿಬಿಐ ತನಿಖೆ ಆಗಬೇಕು. ಯುವಕರಿಗೆ ನ್ಯಾಯ ಸಿಗಬೇಕು ಅಂದರೆ ಸಿಬಿಐ ತನಿಖೆ ಆಗಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಮೋದಿ ತೈಲ ಬೆಲೆ ಏರಿಕೆ ಮಾಡಿದಾಗ ಬಿಜೆಪಿಯವರು ಯಾಕೆ ಪ್ರತಿಭಟಿಸಲಿಲ್ಲ: ಎಂ.ಬಿ.ಪಾಟೀಲ್ ಪ್ರಶ್ನೆಕೇಂದ್ರ ಸರ್ಕಾರ ಯಾಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಗೊತ್ತಿಲ್ಲ. ಯುವಕರ ವಿರೋಧಿ ಧೋರಣೆ ಇದು. ಕೇಂದ್ರ ಸರ್ಕಾರ ಯಾರನ್ನು ರಕ್ಷಣೆ ಮಾಡೋಕೆ ಹೊರಟಿದೆ ಎಂದು ಗೊತ್ತಿಲ್ಲ ಎಂದರು. ಇದನ್ನೂ ಓದಿ: ದರ್ಶನ್ ಪರ ಜಾಮೀನು ಅರ್ಜಿ ಸಲ್ಲಿಸಿಲ್ಲವೇ? – ವಕೀಲರು ಕೊಟ್ಟ ಉತ್ತರವೇನು?ರಾಜ್ಯದಲ್ಲಿ ನೀಟ್ ರದ್ದು ಮಾಡೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನೀಟ್ ರದ್ದು ಮಾಡೋಕೆ ಕಾನೂನಿನಲ್ಲಿ ಅವಕಾಶ ಇಲ್ಲ. ರಾಜ್ಯವೇ ನೀಟ್ ರದ್ದು ಮಾಡೋಕೆ ಕಾನೂನು ತೊಡಕಿದೆ. ಸುಪ್ರೀಂ ಕೋರ್ಟ್ನಿಂದಲೇ ಕಾನೂನು ಆಗಿರೋದು. ಆದರೂ ನೀಟ್‌ನಲ್ಲಿ ಯುವಕರಿಗೆ ಅನ್ಯಾಯ ಮಾಡುತ್ತಿದ್ದಾರೆ. ಸುಪ್ರೀಂ ಕೋರ್ಟ್ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು. ಇಲ್ಲದೇ ಹೋದರೆ ದೇಶಾದ್ಯಂತ ಹೋರಾಟ ಆಗೋ ಸಾಧ್ಯತೆ ಇದೆ ಎಂದು ಹೇಳಿದರು. ಇದನ್ನೂ ಓದಿ: ಹಜ್ ಯಾತ್ರೆಗೆ ತೆರಳಿದ್ದ ಬೆಂಗ್ಳೂರಿನ ಇಬ್ಬರು ಸಾವು – ಕರ್ನಾಟಕದ 10,000ಕ್ಕೂ ಹೆಚ್ಚು ಮಂದಿ ಸೇಫ್‌!






 Advertisement 




Sign in to your account
Username or Email Address


Password

 Remember Me


