ವಿಜಯಪುರ: ರೌಡಿಶೀಟರ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಘಟನೆ ವಿಜಯಪುರ ಜಿಲ್ಲೆ ಚಡಚಣ ಪಟ್ಟಣದ ನೀವರಗಿ ರಸ್ತೆ ಬಳಿ ನಡೆದಿದೆ.ಅಶೋಕ್ ಮಲ್ಲಪ್ಪ ಗಂಟಗಲ್ಲಿ ಎಂಬಾತನ ಮೇಲೆ ಗುಂಡಿನ ದಾಳಿ ನಡೆದಿದೆ. ಕೊಲೆ ಹಾಗೂ ಇತರೆ ಕೇಸ್‌ಗಳಲ್ಲಿ ಅಪರಾಧಿಯಾಗಿದ್ದ ಅಶೋಕ್ ಇತ್ತೀಚೆಗಷ್ಟೇ ಪೆರೋಲ್ ಮೇಲೆ ಆಚೆ ಬಂದಿದ್ದ. ಮನೆಯಿಂದ ಚಡಚಣ ಪಟ್ಟಣಕ್ಕೆ ಆಗಮಿಸುತ್ತಿದ್ದ ವೇಳೆ ಹಂತಕರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಅಲ್‌ಝೈಮರ್ಸ್‌ಗೆ ಹೊಸ ಮದ್ದು; ‘ಡೊನಾನೆಮಾಬ್‌’ ಔಷಧಿ ಆತಂಕದ ಮಧ್ಯೆ ಆಶಾವಾದ – ಪ್ರಯೋಜನವೇನು? ಅಪಾಯಗಳೇನು?ಅಶೋಕ್ ಮೇಲಿನ ಹಳೆಯ ದ್ವೇಷದಿಂದ ಕೃತ್ಯ ಎಸಗಿದ್ದಾರೆಂದು ಪೊಲೀಸರು ಶಂಕಿಸಿದ್ದಾರೆ. ಕೊಲೆಗೀಡಾದ ಅಶೋಕ ಪತ್ನಿ ಚಡಚಣ ಪಟ್ಟಣದ ವಾರ್ಡ್ ನಂಬರ್ 2ರ ಬಿಜೆಪಿ ಸದಸ್ಯೆಯಾಗಿದ್ದಾರೆ. ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಗುಜರಾತ್‌ ಗಲಭೆ, ಬಾಬ್ರಿ ಮಸೀದಿ ಧ್ವಂಸದ ಬಗ್ಗೆ ಶಾಲೆಗಳಲ್ಲಿ ಬೋಧಿಸುವ ಅಗತ್ಯವಿಲ್ಲ: NCERT ನಿರ್ದೇಶಕ Sign in to your account
Username or Email Address


Password

 Remember Me


