ಚಿತ್ರದುರ್ಗ: ದರ್ಶನ್‌ ಮತ್ತು ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ A6, A7 ಆರೋಪಿಗಳನ್ನು ಚಿತ್ರದುರ್ಗ ಡಿವೈಎಸ್ಪಿ (Chitradurga DYSP), ಕಾಮಾಕ್ಷಿಪಾಳ್ಯ ಪೊಲೀಸರ ನೇತೃತ್ವದಲ್ಲಿ ಶುಕ್ರವಾರ ಬಂಧಿಸಲಾಯಿತು. A7 ಆರೋಪಿ ಬಂಧನದ ಬೆನ್ನಲ್ಲೇ ಆತನ ತಂದೆ ಹೃದಯಾಘಾತದಿಂದ (Heart Attack) ಸಾವನ್ನಪ್ಪಿರುವ ಘಟನೆ ಹೃದಯ ವಿದ್ರಾವಕ ಘಟನೆ ನಡೆದಿದೆ.ಚಿತ್ರದುರ್ಗ ಡಿವೈಎಸ್ಪಿ ದಿನಕರ್, ಕಾಮಾಕ್ಷಿಪಾಳ್ಯ ಇನ್ಸ್ ಪೆಕ್ಟರ್ ಸಂಜಯ್ ಗೌಡ್ ನೇತೃತ್ವದಲ್ಲಿ ಎ6 ಆರೋಪಿ (Accused) ಜಗ್ಗ ಅಲಿಯಾಸ್ ಜಗಧೀಶ್, ಎ7 ಆರೋಪಿ ಅನಿ ಅಲಿಯಾಸ್ ಅನುಕುಮಾರ್ ಇಬ್ಬರನ್ನೂ ಬಂಧಿಸಿ ಬೆಂಗಳೂರಿಗೆ ಕರೆದೊಯ್ದರು. ಇದನ್ನೂ ಓದಿ: ಪೋಕ್ಸೊ ಕೇಸಲ್ಲಿ ಬಿಎಸ್‌ವೈಗೆ ರಿಲೀಫ್‌; ಒತ್ತಾಯದ ಕ್ರಮ ಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್‌ ಸೂಚನೆಬಂಧನದ ಬೆನ್ನಲ್ಲೇ ಆರೋಪಿ ಅನುಕುಮಾರ್‌ ತಂದೆ ಚಂದ್ರಣ್ಣ (60) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಗನ ಬಂಧನದಿಂದ ಮನನೊಂದ ತಂದೆ ಚಿತ್ರದುರ್ಗದ ಸಿಹಿ ನೀರು ಹೊಂಡ ಬಳಿಯ ಮನೆಯಲ್ಲಿ ಸಾವಿಗೀಡಾಗಿದ್ದಾರೆ. ಇದನ್ನೂ ಓದಿ: ದೆಹಲಿಯ ಯಮುನಾ ಬಳಿಯ ಪ್ರಾಚೀನ ಶಿವಮಂದಿರ ಕೆಡವಲು ನೀಡಿದ ಆದೇಶ ಎತ್ತಿಹಿಡಿದ ಸುಪ್ರೀಂSign in to your account
Username or Email Address


Password

 Remember Me


