ಕೋಲಾರ: ಹಸುಗಳನ್ನು ಕದ್ದಿದ್ದ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ತಮಿಳುನಾಡು ಕೃಷ್ಣಗಿರಿ ಜಿಲ್ಲೆಯ ಜಾರಕಲ ಹಟ್ಟಿ ಗ್ರಾಮದ ಎ.ಮುನಿರಾಜು ಎಂಬುದಾಗಿ ಗುರುತಿಸಲಾಗಿದೆ.ಒಂದೂವರೆ ವರ್ಷಗಳ ಹಿಂದೆ ಈ ಘಟನೆ ಬೂದಿಕೋಟೆ ಸಮೀಪದ ಶ್ರೀರಂಗಬಂ- ಡಹಳ್ಳಿಯಲ್ಲಿ ನಡೆದಿತ್ತು. ಚನ್ನಕೇಶವ ಎಂಬವರ ಶೆಡ್‌ನಲ್ಲಿದ್ದ ಸುಮಾರು 1.70 ಲಕ್ಷ ಮೌಲ್ಯದ ಎರಡು ಸೀಮೆ ಹಸುಗಳು ಕಳವಾಗಿದ್ದವು. ಈ ಸಂಬಂಧ ಹಸುಗಳ ಮಾಲೀಕರು ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಜೊತೆಗೆ ಕಳವಾಗಿದ್ದ ಹಸುಗಳನ್ನು ಹುಡುಕಿ ಕೊಡುವಂತೆ ಮನವಿ ಮಾಡಿದ್ದರು.ಮಾಲೀಕನ ದೂರು ಸ್ವೀಕರಿಸಿದ ಬೂದಿಕೋಟೆ ಪೊಲೀಸರು ಕಾರ್ಯಾಚರಣೆ ನಡೆಸಿ ಕಳವು ಮಾಡಿದ ಆರೋಪಿ ಹಾಗೂ ಹಸುಗಳನ್ನು ಪತ್ತೆ ಮಾಡಿದ್ದಾರೆ.Sign in to your account
Username or Email Address


Password

 Remember Me


