ಆನೇಕಲ್: ಎರಡು ಟಿಪ್ಪರ್ ಲಾರಿಗಳು (Lorry) ಹಾಗೂ ಕಾರಿನ (Car) ನಡುವೆ ಸರಣಿ ಅಪಘಾತ (Accident) ಸಂಭವಿಸಿದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆ ಹೊಸಕೋಟೆ ಕೋಲಾರ ಹೆದ್ದಾರಿಯ ಗೊಟ್ಟಿಪುರ ಗೇಟ್ ಬಳಿ ನಡೆದಿದೆ.ಇಂದು ಮುಂಜಾನೆ ಸಮಯದಲ್ಲಿ ಈ ಘಟನೆ ನಡೆದಿದ್ದು, ಎರಡು ಲಾರಿಗಳ ನಡುವೆ ಸಿಲುಕಿ ಕಾರು ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರಿಗೂ ಸಹ ಗಂಭೀರ ಗಾಯಗಳಾಗಿದೆ. ಇನ್ನು ಗಾಯಾಳುಗಳನ್ನು ಹೊಸಕೋಟೆ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಹಿನ್ನೆಲೆ ಹೊಸಕೋಟೆ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇದನ್ನೂ ಓದಿ: ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲಿಸ್ತೀನ್‌ ಧ್ವಜ ಪ್ರದರ್ಶನ – 8 ಜನರ ವಿರುದ್ಧ ಕೇಸ್‌ಸ್ಥಳಕ್ಕೆ ಹೊಸಕೋಟೆ ಸಂಚಾರಿ ಪೋಲೀಸರು ಭೇಟಿ ನೀಡಿ ವಾಹನಗಳನ್ನು ಹೆದ್ದಾರಿಯಿಂದ ಪಕ್ಕಕ್ಕೆ ನಿಲ್ಲಿಸಿ ಟ್ರಾಫಿಕ್ ಜಾಮ್ ಕ್ಲಿಯರ್ ಮಾಡಿದ್ದಾರೆ. ಘಟನೆ ಸಂಬಂಧ ಹೊಸಕೋಟೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ. ಇದನ್ನೂ ಓದಿ: ಅಹಿಂದ ಹೆಸರಿನಲ್ಲಿ ಸಮಾಜವಾದಿಯೆಂದು ಆಡಳಿತಕ್ಕೆ ಬಂದವರು ಸಿಎಂ: ಪ್ರಹ್ಲಾದ್ ಜೋಶಿ ಕಿಡಿ


 Advertisement 







 Advertisement 




Sign in to your account
Username or Email Address


Password

 Remember Me


