ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಮುಖ ಕ್ಷೇತ್ರಗಳಲ್ಲಿ ಒಂದಾಗಿರುವ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಅಂತಿಮ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ಅಭ್ಯರ್ಥಿ ಪಿ.ಸಿ ಗದ್ದಿಗೌಡರ್ (P. C. Gaddigoudar)  ಅವರು ಗೆಲುವು ಸಾಧಿಸಿದ್ದು, ಈ ಮೂಲಕ 5ನೇ ಬಾರಿ ಗೆಲುವಿನ ಗದ್ದುಗೆ ಏರಿದ್ದಾರೆ.ಲಿಂಗಾಯತ ಸಮುದಾಯದ ಪ್ರಾಬಲ್ಯ ಇರುವ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯಿಂದ ಲಿಂಗಾಯತ ಅಭ್ಯರ್ಥಿಗಳೇ ಅಖಾಡದಲ್ಲಿದ್ದರು. ಹೀಗಾಗಿ ಪೈಪೋಟಿಯನ್ನು ಮತ್ತಷ್ಟು ಹೆಚ್ಚಿಸಿತ್ತು. ಪಿಸಿ ಗದ್ದಿಗೌಡರ್ ಅವರು ಸ್ಪರ್ಧಿಸಿದರೆ, ಇತ್ತ ಕಾಂಗ್ರೆಸ್‍ನಿಂದ ಮೊದಲ ಬಾರಿ ಸಚಿವ ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತಾ ಪಾಟೀಲ್ (Samyukta Patil) ಅದೃಷ್ಟ ಪರೀಕ್ಷೆಗೆ ಇಳಿದು ಸೋತಿದ್ದಾರೆ.ಗದ್ದಿಗೌಡರ್ ಅವರು ಸಂಯುಕ್ತಾ ಪಾಟೀಲ್ ವಿರುದ್ಧ 6,83,99 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಗದ್ದಿಗೌಡರಿಗೆ 6,71,039 ಮತಗಳು ಬಿದ್ದರೆ, ಸಂಯುಕ್ತಾ ಪಾಟೀಲ್ ಅವರು 6,02,640 ಮತಗಳನ್ನು ಗಳಿಸಿದ್ದಾರೆ. ಈ ಮೂಲಕ ಸಂಯುಕ್ತಾ ಪಾಟೀಲ್ ಅವರು ಮೊದಲ ಪ್ರಯತ್ನದಲ್ಲಿ ಸಂಸತ್ ಪ್ರವೇಶಿಸಲು ವಿಫಲರಾದರು.ಕಳೆದ ಚುನಾವಣೆಯಲ್ಲಿ ಏನಾಗಿತ್ತು?: 2019 ರಲ್ಲಿ ನಡೆದ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿದ್ದ ಪಿ.ಸಿ.ಗದ್ದಿಗೌಡರ್ 1,68,187 ಮತಗಳ ಅಂತರದಿಂದ ಗೆಲುವು ದಾಖಲಿಸಿ ಸತತ ನಾಲ್ಕನೆಯ ಬಾರಿ ಸಂಸದರಾಗಿ ಆಯ್ಕೆಯಾದರು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವೀಣಾ ಕಾಶಪ್ಪನವರ್ ಭಾರೀ ಅಂತರದ ಸೋಲು ಅನುಭವಿಸಿದರು. ರಾಜ್ಯದಲ್ಲಿ ಮೈತ್ರಿ ಸರ್ಕಾರವಿದ್ದರೂ ಬಿಜೆಪಿ ಅಭ್ಯರ್ಥಿ ಗೆದ್ದು ಸೋಲಿಲ್ಲದ ಸರದಾರ ಎನಿಸಿಕೊಂಡಿದ್ದಾರೆ.Sign in to your account
Username or Email Address


Password

 Remember Me


