ಬೆಂಗಳೂರು: ಡಿಕೆ ಶಿವಕುಮಾರ್ (DK Shivakumar) ಅವರಿಗೆ ರಕ್ಷಣೆ ಮಾಡೋದಕ್ಕೆ ದೇವರು ಇರುವಂತೆ ನಮಗೂ ದೇವರಿದ್ದಾನೆ. ನಾನು ರಾಜರಾಜೇಶ್ವರ ದೇವಾಲಯಕ್ಕೆ ಹೋಗಿದ್ದೇನೆ. ರಾಜರಾಜೇಶ್ವರ ದೇವರಿಗೇ ಇದನ್ನ ಬಿಡ್ತೀನಿ, ರಾಜರಾಜೇಶ್ವರ ದೇವರೆ ಅವರಿಗೆ ಶಿಕ್ಷೆ ಕೊಡಲಿ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.ನಗರದ ಜೆಡಿಎಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿಂದು ಸಭೆ ನಡೆಸಿ ಮಾತನಾಡಿದ ಅವರು, `ನಮ್ಮ ಸರ್ಕಾರದ ನಾಶಕ್ಕಾಗಿ ನನ್ನ ಹಾಗೂ ಸಿಎಂ ವಿರುದ್ಧ ಶತ್ರು ಭೈರವಿ ಯಾಗ (Shatru Bhairavi Yaga) ಮಾಡಿಸುತ್ತಿದ್ದಾರೆ’ ಎಂಬ ಡಿಕೆ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ. “ಆಚಾರವಿಲ್ಲದ ನಾಲಿಗೆ, ನಿನ್ನ ನೀಚ ಬುದ್ದಿ ಬಿಡು ನಾಲಿಗೆ” ಎಂಬ ಪುರಂದರ ದಾಸರ ಕೀರ್ತನೆಯ ಮೂಲಕ ಡಿಕೆಶಿಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಥಿಯೇಟರ್ ಸಮಸ್ಯೆ ಬಗ್ಗೆ ರಿಷಬ್ ಶೆಟ್ಟಿ ರಿಯಾಕ್ಷನ್ಯಾಗ ಮಾಡಿಸೋದು ಡಿಕೆಶಿ ಸಂಸ್ಕೃತಿ:
ಡಿಸಿಎಂ ಆಗಿದ್ದರೂ ಆ ಸ್ಥಾನದ ಗೌರವ, ಮೌಲ್ಯ ಏನು ಅಂತ ಅವರಿಗೆ ಅರ್ಥ ಅಗಿಲ್ಲ. ಒಟ್ಟಿನಲ್ಲಿ ನಮ್ಮ ಕುಟುಂಬ ಮುಗಿಸಲೇಬೇಕು ಅಂತ ಶ್ರಮಪಡ್ತಿದ್ದಾರೆ. ಅದರ ಮುಂದುವರಿದ ಭಾಗವಾಗಿ ಯಾಗದ ಮಾತು ಹೇಳ್ತಿದ್ದಾರೆ. ನಮ್ಮ ಕುಟುಂಬದಲ್ಲಿ ನನಗೆ ತಿಳಿವಳಿಕೆ ಬಂದಾಗಿನಿಂದ ಕುರಿ, ಕೋಣ, ಮೇಕೆ ಕಡಿಯೋದು ಯಾವತ್ತೂ ಮಾಡಿಲ್ಲ. ನಾವು ದೇವರ ಪೂಜೆ ಮಾಡ್ತೀವಿ. ಹಿಂದೂ ಸಂಸ್ಕೃತಿಯಲ್ಲಿ ಇರೋ ಧಾರ್ಮಿಕವಾಗಿ ನಾವು ಪೂಜೆ ಮಾಡ್ತೀವಿ. ನಮಗೆ ಇರೋ ದೋಷ ಪರಿಹಾರಕ್ಕೆ ದೇವಾಲಯಕ್ಕೆ ಹೋಗ್ತೀವಿ ಹೊರತು ಯಾಗ ಮಾಡುವುದಿಲ್ಲ. ಯಾಗ ಮಾಡೋದು ಡಿಕೆಶಿ ಸಂಸ್ಕೃತಿ ಎಂದು ವಾಗ್ದಾಳಿ ನಡೆಸಿದ್ದಾರೆ.ಕಳ್ಳನಿಗೆ ಮಳ್ಳ ಸಾಕ್ಷಿ:
ಕಳ್ಳನಿಗೆ ಮಳ್ಳನ ಸಾಕ್ಷಿ ಎಂಬಂತೆ ಅವರೆ ತಮ್ಮ ನಮ್ಮ ಹೆಸರು ಹೇಳ್ತಾರೆ. ನಾನು ಎರಡು ಬಾರಿ ಸಿಎಂ ಆಗಿದ್ದೆ ಕೋಣ, ಕುರಿ ಕಡಿದು ಆಗಿಲ್ಲ. ದೇವರು ಕೊಟ್ಟು, ಆಗಿದ್ದೇನೆ. ದೇವೇಗೌಡರು ಅಧಿಕಾರ ಅನುಭವಿಸಿದ್ದೇ ಕಡಿಮೆ ಅವಧಿ. ಅದೇನು ಕೋಳಿ, ಕುರಿ ಕಡಿದು ಮಾಡಿ ಆಗಿದ್ದಾ? ಡಿಕೆ ಶಿವಕುಮಾರ್ ದೇವರು, ಶರಣರ ಜೊತೆ ಚೆಲ್ಲಾಟ ಆಡಬಾರದು. ಡಿಸಿಎಂ ನನಗೆ ಸ್ಪಷ್ಟ ಮಾಹಿತಿ ಇದೆ ಅಂತ ಹೇಳಿದ್ದಾರೆ. ಈಗ ಎಲ್ಲದ್ದಕ್ಕೂ ಎಸ್‌ಐಟಿ ಮಾಡ್ತಾರೆ, ಇದಕ್ಕೂ ಒಂದು ಎಸ್‌ಐಟಿ ತನಿಖೆ ಮಾಡಸಲಿ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಒಡಿಶಾದಲ್ಲಿ ಹೆಚ್ಚಿದ ತಾಪಮಾನ – 3 ದಿನದಲ್ಲಿ ಹೀಟ್‌ಸ್ಟ್ರೋಕ್‌ಗೆ 20 ಮಂದಿ ಸಾವುಗೌಡರ ಕುಟುಂಬ ಮುಗಿಸುವ ಸಂಚು:
ನಾನು ಇತ್ತೀಚೆಗೆ ವಿಶ್ರಾಂತಿಗೆಂದು ಕಬಿನಿ ಹಿನ್ನಿರಿಗೆ ಹೋಗಿದ್ದೆ. ಅದಕ್ಕೂ ಕೇರಳಕ್ಕೆ ಮಾಠ ಮಾಡಿಸೋಕೆ ಅಂತ ಹೇಳಿದ್ರು. ನನ್ನ ಮೊಮ್ಮಗನ ಜೊತೆ ವಿಶ್ರಾಂತಿಗೆ ಹೋಗಿದ್ದೆ. ನಾನು ಹೋಗಿ ಯಾಗ ಮಾಡಿಸಬೇಕಾ? ಕಾನೂನಿನ ಪ್ರಕಾರ ಕೋಣ, ಕುರಿ ಬಲಿ ಕೊಟ್ಟು ನಾಶ ಮಾಡೋದು ಅಪರಾಧ. ಆಗ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ತಾನೆ. ಜನರಲ್ಲಿ ನಮ್ಮ ಕುಟುಂಬ ನೆಲ ಕಚ್ಚಿಸಬೇಕು ಅಂತ ಇಂತಹ ಸುದ್ದಿ ಹರಡಿಸುತ್ತಿದ್ದಾರೆ. ಇಡೀ ದೇವೇಗೌಡ ಕುಟುಂಬ ನಾಶ ಮಾಡೋಕೆ ಮುಂದಾಗಿದ್ದಾರೆ. ಇದು ಅದರ ಮುಂದುವರಿದ ಭಾಗ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.ಯಾವಾಗ ಬಿಜೆಪಿ ಜೊತೆಗೆ ಹೊಂದಾಣಿಕೆ ಆಯ್ತು ಅವತ್ತಿಂದ ಇವರಿಗೆ ಉಳಿಗಾಲ ಇಲ್ಲ ಅಂತ ಹೀಗೆಲ್ಲ ಮಾಡ್ತಿದ್ದಾರೆ. 25 ಸ್ಥಾನ ಗೆಲ್ಲುತ್ತೇವೆ ಅಂತ ಓಡಾಡುತ್ತಿದ್ದರು. ನಾವು ಮೈತ್ರಿ ಆದಾಗ ಅವರಿಗೆ ಗೆಲುವು ಸಾಧ್ಯವಿಲ್ಲ ಅಂತಾ ಗೊತ್ತಾಯ್ತು, ಅದಕ್ಕೆ ನಮ್ಮ ಕುಟುಂಬವನ್ನ ಟಾರ್ಗೆಟ್ ಮಾಡ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಮದರ್ ಡೈರಿ ಶಾಕ್‌ – ಇಂದಿನಿಂದ ಪ್ರತಿ ಲೀಟರ್‌ ಹಾಲಿನ ದರ 2 ರೂ. ಹೆಚ್ಚಳ!Sign in to your account
Username or Email Address


Password

 Remember Me


