ಬೆಂಗಳೂರು: ದೇಗುಲಗಳಲ್ಲಿ ಪೂಜಾಕೈಂಕರ್ಯಗಳು ಸುಲಲಿತವಾಗಿ ನಡೆಯಲು ಏರ್ಪಡಿಸುವಂತೆ ಮುಜರಾಯಿ ದೇವಸ್ಥಾನದ ಅರ್ಚಕರು ಹಾಗೂ ಅರ್ಚಕರ ಒಕ್ಕೂಟದಿಂದ ಮನವಿ ಸಲ್ಲಿಸಲಾಯಿತು.ಇಂದು ಸಚಿವೆ ಶಶಿಕಲಾ ಜೊಲ್ಲೆ ಅವರನ್ನು ಭೇಟಿಯಾದ ಅರ್ಚಕರ ಒಕ್ಕೂಟ, ಮುಜುರಾಯಿ ದೇವಸ್ಥಾನಗಳಲ್ಲಿ ಆಗಬೇಕಾದ ಕೆಲಸಗಳ ಬಗ್ಗೆ ಮನವಿ ಪತ್ರ ನೀಡಿದರು. ಇದೇ ವೇಳೆ ಮುಜರಾಯಿ ಇಲಾಖೆಗೆ ಒಳಪಟ್ಟ ದೇವಸ್ಥಾನಗಳಲ್ಲಿ ಎಲ್ಲ COVID ನಿಯಮ ಪಾಲನೆ ಅನುಸಾರ ಎಲ್ಲ ಸೇವೆಗಳು ಹಾಗೂ ಪೂಜಾ ಕೈಂಕರ್ಯಗಳನ್ನು ಆರಂಭಿಸಲು ಅನುಮತಿ ನೀಡಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ.  ಇದನ್ನೂ ಓದಿ: ಹೆಮ್ಮೆಯಿಂದ ಬದುಕಿದ್ದು, ಅವಮಾನದಿಂದ ಬದುಕಲು ಸಾಧ್ಯವಾಗ್ತಿಲ್ಲ: ಗಿರಿ ಡೆತ್‍ನೋಟ್ಇಷ್ಟು ಮಾತ್ರವಲ್ಲದೆ ಮುಜರಾಯಿ ಇಲಾಖೆಯ ದೇವಸ್ಥಾನ ದೇವಸ್ಥಾನಗಳಲ್ಲಿ ಆಗಬೇಕಾದ ಕೆಲಸಗಳ ಬಗ್ಗೆ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು. ಇದನ್ನೂ ಓದಿ: MSc ಓದಿ ಕಸ ಗುಡಿಸುತ್ತಿದ್ದ ಮಹಿಳೆಗೆ ಸರ್ಕಾರಿ ಕೆಲಸ ಕೊಟ್ಟ ಸಚಿವರುSign in to your account
Username or Email Address


Password

 Remember Me


