ಬೆಂಗಳೂರು: ಯುವಜನರನ್ನು ಗುರಿಯಾಗಿಸಿ ಸಮಾಜ ಘಾತುಕ ಕೃತ್ಯ ನಡೆಸುವ ಡ್ರಗ್ಸ್ ಮಾಫಿಯಾವನ್ನು ರಾಜ್ಯದಲ್ಲಿ ಬಗ್ಗು ಬಡಿಯಲು ಸರ್ಕಾರ ಬದ್ಧವಾಗಿದ್ದು, ಸಾರ್ವಜನಿಕರೂ ಈ ನಿಟ್ಟಿನಲ್ಲಿ ಪೊಲೀಸರ ಜೊತೆ ಕೈ ಜೋಡಿಸಬೇಕೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕರೆ ನೀಡಿದ್ದಾರೆ.ವಿಧಾನ ಪರಿಷತ್ತಿನ ಶೂನ್ಯ ವೇಳೆಯಲ್ಲಿ ಜೆಡಿಎಸ್ ಸದಸ್ಯ ಅಪ್ಪಾಜಿ ಗೌಡ, ಅವರು ಪ್ರಸ್ತಾಪಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಪೊಲೀಸರು, ಡ್ರಗ್ಸ್ ಮಾಫಿಯಾಕ್ಕೆ ಕಡಿವಾಣ ಹಾಕಲು ಕಟಿಬದ್ಧರಾಗಿದ್ದು, ಈಗಾಗಲೇ, ದಾಖಲೆಯ ಪ್ರಮಾಣದಲ್ಲಿ ಅಕ್ರಮ ಡ್ರಗ್ಸ್ ದಾಸ್ತಾನನ್ನು ವಶಪಡಿಸಿಕೊಳ್ಳಲಾಗಿದೆ. ಡ್ರಗ್ಸ್ ಮಾಫಿಯಾ ಜಾಲವನ್ನು ನಿರ್ಮೂಲನೆ ಮಾಡಲು ಹಾಗೂ ಈ ಅಕ್ರಮ ದಂಧೆಯಲ್ಲಿ ಭಾಗಿಯಾಗಿರುವ ವ್ಯಕ್ತಿಗಳನ್ನು ಗುರುತಿಸಿ, ಬಂಧಿಸಲು ಅನುಕೂಲವಾಗುವಂತೆ ಸಾರ್ವಜನಿಕರೂ ಸಹಕರಿಸಬೇಕು ಎಂದು ಮನವಿ ಮಾಡಿದ ಸಚಿವರು ಪೊಲೀಸರಿಗೆ ಅಗತ್ಯ ಮಾಹಿತಿ ಒದಗಿಸಿದರೆ ಡ್ರಗ್ಸ್ ಮಾಫಿಯಾವನ್ನು ಬುಡಸಮೇತ ಕಿತ್ತುಹಾಕಬಹುದು ಎಂದರು. ಇದನ್ನೂ ಓದಿ: ಸಿಎಂ ಬೊಮ್ಮಾಯಿ ಹಿಂದೊಮ್ಮೆ ಕಾಂಗ್ರೆಸ್ ಕದ ತಟ್ಟಿದ್ದರು: ವಿನಯ್ ಕುಮಾರ್ ಸೊರಕೆಕಾಂಗ್ರೆಸ್ ಸದಸ್ಯ ಪ್ರಕಾಶ್ ರಾಥೋಡ್ ಅವರು ಪ್ರಸ್ತಾಪಿಸಿದ ಹೆಣ್ಣು ಶಿಶು ಮಕ್ಕಳ ಮಾರಾಟ ಜಾಲದ ಬಗ್ಗೆ, ಸಚಿವರು, ವಿಜಯಪುರದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ವರದಿ ತರಿಸಿಕೊಂಡು ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಕಾಂಗ್ರೆಸ್‍ನ ಹಲವು ಶಾಸಕರು ಬಿಜೆಪಿಗೆ ಬರ್ತಾರೆ: ಬಿಎಸ್‍ವೈ






 Advertisement 




Sign in to your account
Username or Email Address


Password

 Remember Me


