ಧಾರವಾಡ: ಮೆಣಸಿಕಾಯಿ ಹೊಲದಲ್ಲಿ ಗಾಂಜಾ ಬೆಳೆದಿದ್ದ ಮೂವರು ಜೈಲು ಪಾಲಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ.ಜಿಲ್ಲೆಯ ಕುಂದಗೋಳ ತಾಲೂಕಿನ ಗುಡಗೇರಿ ಠಾಣೆ ಸರಹದ್ದಿನ ಭೂಕೊಪ್ಪ ಗ್ರಾಮದಲ್ಲಿ ಮೂರು ಪ್ರತ್ಯೇಕ ಜಮೀನುಗಳಲ್ಲಿ ಮೆಣಸಿನಕಾಯಿ ಬೆಳೆಯ ಜೊತೆಗೆ ಗಾಂಜಾ ಗಿಡಗಳನ್ನು ತಮ್ಮ ಅಕ್ರಮ ಲಾಭಕ್ಕಾಗಿ ಬೆಳೆದ ಬಗ್ಗೆ ಮಾಹಿತಿ ತಿಳಿದು, ಪೊಲೀಸರು ದಾಳಿ ಮಾಡಿ ಗಾಂಜಾ ಗಿಡ ಹಾಗೂ ಆರೋಪಿಗಳನ್ನು ವಶಕ್ಕೆ ಪಡೆದಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ ಹೇಳಿದರು. ಇದನ್ನೂ ಓದಿ: ವೃದ್ಧೆಯ ಹತ್ಯೆ ಮಾಡಿ ಮೃತದೇಹದೊಂದಿಗೆ ಯುವಕ ಸೆಕ್ಸ್!ಭೂಕೊಪ್ಪ ಗ್ರಾಮದ ಮೊದಲ ಆರೋಪಿ ತನ್ನ ಜಮೀನಿನಲ್ಲಿ ಅಂದಾಜು 1 ಲಕ್ಷ 25 ಸಾವಿರ ಮೌಲ್ಯದ 31 ಕೆಜಿ ತೂಕದ ಒಟ್ಟು 32 ಹಸಿಗಾಂಜಾ ಗಿಡಗಳನ್ನು ಹಚ್ಚಿದ್ದ, ಎರಡನೇ ಆರೋಪಿಯು 80 ಸಾವಿರ ಮೌಲ್ಯದ 20 ಕೆಜಿ 160 ಗ್ರಾಂ. ತೂಕದ ಒಟ್ಟು 50 ಹಸಿಗಾಂಜಾ ಗಿಡಗಳು ಹಾಗೂ ಮೂರನೇ ಆರೋಪಿು 25 ಸಾವಿರ ಮೌಲ್ಯದ 8.5 ಕೆಜಿ ತೂಕದ 17 ಹಸಿಗಾಂಜಾ ಒಟ್ಟು 59 ಕೆಜಿ 760 ಗ್ರಾಂ ಹಸಿ ಗಾಂಜಾ ಗಿಡಗಳನ್ನು ಬೆಳಸಿದ್ದರು. ಇದನ್ನೂ ಓದಿ: ನಿರುದ್ಯೋಗ ದಿನ ಆಚರಿಸಿ ಪಿಎಂಗೆ ನಿಮ್ಮ ಪದವಿ ಪ್ರಮಾಣ ಪತ್ರ ಹಿಂದಿರುಗಿಸಿ: ಡಿ.ಕೆ. ಶಿವಕುಮಾರ್ ಕರೆಸದ್ಯ ಒಟ್ಟು ಅಂದಾಜು ಮೊತ್ತ ರೂ. 2 ಲಕ್ಷ 30 ಸಾವಿರ ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದು, ಆರೋಪಿಗಳನ್ನು ಜಿಲ್ಲಾ ಸತ್ರನ್ಯಾಯಾಲಯದಲ್ಲಿ ಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.






 Advertisement 




Sign in to your account
Username or Email Address


Password

 Remember Me


